ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಯುಎಇಯ ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ

ದುಬೈ: ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಅಧ್ಯಕ್ಷರಾಗಿ...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17)...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ...

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Related Articles

Popular Categories