ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories