ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

Related Articles

Popular Categories