ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories