ಕುವೈತ್ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ...

ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತ್ಯು

ಕುವೈತ್‌: ಕುವೈತ್‌ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಮ್ಯಾಥ್ಯೂ ಮುಝಕ್ಕಲ್‌, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್‌ ಮತ್ತು ಎರಿನ್‌ ಎಂದು ಗುರುತಿಸಾಗಿದೆ.

ರಜೆಯನ್ನು ತಮ್ಮ ಊರಾದ ನೆಡುಂಬಸ್ಸೆರಿಯಲ್ಲಿ ಕಳೆದು ಗುರುವಾರ ರಾತ್ರಿಯಷ್ಟೇ ಕುಟುಂಬ ಕುವೈತ್‌ಗೆ ಮರಳಿತ್ತು. ಮ್ಯಾಥ್ಯೂ ಕುವೈತ್‌ನಲ್ಲಿ 15 ವರ್ಷಗಳಿಂದ ಉದ್ಯೋಗದಲ್ಲಿದ್ದರು. ಪತ್ನಿ ನರ್ಸ್‌ ಆಗಿದ್ದರು, ಮಕ್ಕಳೂ ಕುವೈತ್‌ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕೊಠಡಿಯಲ್ಲಿದ್ದ ಎಸಿಯಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories