ಕುವೈತ್ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ...

ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತ್ಯು

ಕುವೈತ್‌: ಕುವೈತ್‌ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಮ್ಯಾಥ್ಯೂ ಮುಝಕ್ಕಲ್‌, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್‌ ಮತ್ತು ಎರಿನ್‌ ಎಂದು ಗುರುತಿಸಾಗಿದೆ.

ರಜೆಯನ್ನು ತಮ್ಮ ಊರಾದ ನೆಡುಂಬಸ್ಸೆರಿಯಲ್ಲಿ ಕಳೆದು ಗುರುವಾರ ರಾತ್ರಿಯಷ್ಟೇ ಕುಟುಂಬ ಕುವೈತ್‌ಗೆ ಮರಳಿತ್ತು. ಮ್ಯಾಥ್ಯೂ ಕುವೈತ್‌ನಲ್ಲಿ 15 ವರ್ಷಗಳಿಂದ ಉದ್ಯೋಗದಲ್ಲಿದ್ದರು. ಪತ್ನಿ ನರ್ಸ್‌ ಆಗಿದ್ದರು, ಮಕ್ಕಳೂ ಕುವೈತ್‌ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕೊಠಡಿಯಲ್ಲಿದ್ದ ಎಸಿಯಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories