ಕುವೈತ್ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ‘ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಕುವೈತ್ ಅಗ್ನಿ ದುರಂತ ಮೃತಪಟ್ಟಿರುವ ಕೇರಳ ನಿವಾಸಿಗಳ ಕುಟಂಬಕ್ಕೆ ಅಲ್ಲಿನ ಸರಕಾರ  5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಅದರಂತೆಯೇ ಕರ್ನಾಟಕ ಸರಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ಭಾರತೀಯರು ಕೆಲಸ ಆರಿಸಿ ಗಲ್ಸ್ ರಾಷ್ಟ್ರಗಳಿಗೆ ವಲಸೆ ಹೋಗುವುದು ಸಾಮಾನ್ಯ. ಜೂ.12ರಂದು ಕುವೈತ್ ಮಾಂಗಾಫ್‍ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 45 ಮಂದಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದೆ’

ಡಾ.ಆರತಿ ಕೃಷ್ಣ ಉಪಾಧ್ಯಕ್ಷೆ ಅನಿವಾಸಿ ಭಾರತೀಯ ಸಮಿತಿ

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories