ಕುವೈತ್ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ‘ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಕುವೈತ್ ಅಗ್ನಿ ದುರಂತ ಮೃತಪಟ್ಟಿರುವ ಕೇರಳ ನಿವಾಸಿಗಳ ಕುಟಂಬಕ್ಕೆ ಅಲ್ಲಿನ ಸರಕಾರ  5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಅದರಂತೆಯೇ ಕರ್ನಾಟಕ ಸರಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ಭಾರತೀಯರು ಕೆಲಸ ಆರಿಸಿ ಗಲ್ಸ್ ರಾಷ್ಟ್ರಗಳಿಗೆ ವಲಸೆ ಹೋಗುವುದು ಸಾಮಾನ್ಯ. ಜೂ.12ರಂದು ಕುವೈತ್ ಮಾಂಗಾಫ್‍ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 45 ಮಂದಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದೆ’

ಡಾ.ಆರತಿ ಕೃಷ್ಣ ಉಪಾಧ್ಯಕ್ಷೆ ಅನಿವಾಸಿ ಭಾರತೀಯ ಸಮಿತಿ

Hot this week

ಖತರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾ: ಖತರ್‌ನಲ್ಲಿ ಮೂರು ವರ್ಷಗಳ ಯಶಸ್ವಿ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ಭಾರತದ ರಾಯಭಾರಿ...

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

Related Articles

Popular Categories