ಕುವೈತ್ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ‘ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಕುವೈತ್ ಅಗ್ನಿ ದುರಂತ ಮೃತಪಟ್ಟಿರುವ ಕೇರಳ ನಿವಾಸಿಗಳ ಕುಟಂಬಕ್ಕೆ ಅಲ್ಲಿನ ಸರಕಾರ  5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಅದರಂತೆಯೇ ಕರ್ನಾಟಕ ಸರಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ಭಾರತೀಯರು ಕೆಲಸ ಆರಿಸಿ ಗಲ್ಸ್ ರಾಷ್ಟ್ರಗಳಿಗೆ ವಲಸೆ ಹೋಗುವುದು ಸಾಮಾನ್ಯ. ಜೂ.12ರಂದು ಕುವೈತ್ ಮಾಂಗಾಫ್‍ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 45 ಮಂದಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದೆ’

ಡಾ.ಆರತಿ ಕೃಷ್ಣ ಉಪಾಧ್ಯಕ್ಷೆ ಅನಿವಾಸಿ ಭಾರತೀಯ ಸಮಿತಿ

Hot this week

ಕೊಲ್ಲಿ ಯುದ್ಧ; ಗಲ್ಫ್ ರಾಷ್ಟ್ರಗಳಲ್ಲಿ ಅಗತ್ಯವಸ್ತುಗಳ ಮೇಲೆ ಬೀರುತ್ತಿದೆ ಪರಿಣಾಮ!

ಸೌದಿ ಅರೇಬಿಯಾ: ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡುಯುತ್ತಿರುವ ಸಂಘರ್ಷವು ಮುಂದುವರಿಯುತ್ತಿರುವುದರಿಂದ...

ಸೌದಿ: ಅಲ್ ಖಮರ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಫ್ತಾರ್ ಕೂಟ

ಸೌದಿ ಅರೇಬಿಯಾ: ರಮಝಾನ್ ಪವಿತ್ರ ತಿಂಗಳ ಅಂಗವಾಗಿ ಅಲ್ ಖಮರ್ ವೆಲ್ಫೇರ್...

Yakshagana staged in German for first time in Munich, children from Europe perform

Munich: In a significant moment for coastal Karnataka’s traditional...

ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಪ್ರವಾಸಿ ಕನ್ನಡಿಗರಿಗೆ ಧೈರ್ಯ ತುಂಬಿದ ಎಂ.ಎ.ಗಫೂರ್

ದುಬೈ: ಅಮೇರಿಕ-ಇಸ್ರೇಲ್ ಹಾಗು ಇರಾನ್ ಮಧ್ಯೆಗಿನ ಸಂಘರ್ಷದಿಂದ ದುಬೈಯಲ್ಲಿ ಸಂಕಷ್ಟಕ್ಕೀಡಾಗಿರುವ ಕನ್ನಡಿಗ...

Related Articles

Popular Categories