ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

Related Articles

Popular Categories