ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ಖತರ್‌ ಕರ್ನಾಟಕ ಸಂಘದಿಂದ ‘ತಾಯಂದಿರ ದಿನ 2026’ ಆಚರಣೆ

ದೋಹಾ(ಖತರ್‌): ಕರ್ನಾಟಕ ಸಂಘ ಖತರ್‌ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

ಮೇ 15ರಂದು ಬಹರೈನ್ ಕನ್ನಡ ಸಂಘದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಅಲ್ ಹಿಲಾಲ್ ಹೆಲ್ತ್ ಕೇರ್ ಗ್ರೂಪ್...

KCWA holds General Body Meeting in Kuwait, announces major cultural event in December

Kuwait City: Kuwait Canara Welfare Association (KCWA) held its...

ನ್ಯೂಯಾರ್ಕ್; ಆಲ್ಬನಿ ಕನ್ನಡಿಗರಿಂದ ಮಸಾಲ ದೋಸೆ ಬ್ರಂಚ್: ಹಿಂದೂ ದೇವಾಲಯಕ್ಕೆ ಧನ ಸಹಾಯ

ನ್ಯೂಯಾರ್ಕ್ ರಾಜ್ಯದ ರಾಜಧಾನಿ ಅಲ್ಬನಿಯಲ್ಲಿರುವ ಕನ್ನಡಿಗರು, ಇತ್ತೀಚೆಗೆ ಇಲ್ಲಿರುವ ಹಿಂದೂ ದೇವಸ್ಥಾನದಲ್ಲಿ...

ದ್ವೀಪ ರಾಷ್ಟ್ರ ಬಹರೈನ್‌ನಲ್ಲಿ ಸಾರ್ಥಕೆತೆಯನ್ನು ಕಂಡ ಮಂಗಳೂರಿನ ಹೃದಯವಂತ ಅಮರನಾಥ್ ರೈ!

ಬಹರೈನ್‌: ಪ್ರಾಮಾಣಿಕತೆ ಮತ್ತು ದುಡಿಮೆ—ಈ ಎರಡು ಮೌಲ್ಯಗಳು ಒಬ್ಬನ ಬದುಕನ್ನು ಎಷ್ಟು...

Related Articles

Popular Categories