ಯುಎಇಯುಎಇ: ಡಿ.31ಕ್ಕೆ ಸಾರ್ವಜನಿಕ ಕ್ಷಮಾಪಣೆ ಅಂತ್ಯ

ಯುಎಇ: ಡಿ.31ಕ್ಕೆ ಸಾರ್ವಜನಿಕ ಕ್ಷಮಾಪಣೆ ಅಂತ್ಯ

4 ತಿಂಗಳ ಅಭಿಯಾನದಲ್ಲಿ ಹಲವು ಅನಿವಾಸಿಯರಿಗೆ ಲಾಭ


ದುಬೈ/ ಯುಎಇ: ಕಳೆದ ನಾಲ್ಕು ತಿಂಗಳಿನಿಂದ ಯುಎಇಯಲ್ಲಿದ್ದ ಸಾರ್ವಜನಿಕ ಕ್ಷಮಾಪಣೆ ಅಭಿಯಾನ ಡಿ.31ಕ್ಕೆ ಅಂತ್ಯಗೊಳ್ಳಲಿದೆ. ಈ ಅವಧಿಯೊಳಗೆ ಸೂಕ್ತ ದಾಖಲೆಗಳಿಲ್ಲದ ಅನಿವಾಸಿಗರು ಶರಣಾಗುವ ಮೂಲಕ ಸ್ವಂತ ಊರಿಗೆ ಹಿಂದಿರುಗಬಹುದು. ಇಲ್ಲವೇ ದಾಖಲೆಗಳನ್ನು ಸರಿಪಡಿಸಬಹುದು ಎಂದು ದುಬೈಯ ಜಿಡಿಆರ್‌ಎಫ್‌ಎ ನಿರ್ದೇಶಕ ಜ.ಲೆ.ಜ.ಮುಹಮ್ಮದ್ ಅಹ್ಮದ್ ಅಲ್ ಮರಿ ಹೇಳಿದ್ದಾರೆ.
ಸಾರ್ವಜನಿಕ ಕ್ಷಮಾಪಣೆ ಅವಧಿ ಮುಗಿದ ಬಳಿಕ ಕಾನೂನು ಉಲ್ಲಂಘಿಸಿ ನೆಲೆಸಿರುವವರನ್ನು ಪತ್ತೆಹಚ್ಚಿಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.
ಈ ನಾಲ್ಕು ತಿಂಗಳ ಕ್ಷಮಾಪಣ ಕಾಲಾವಧಿಯು ಯುನೈಟಡ್ ಅರಬ್ ಎಮಿರೇಟ್ಸ್‌ನ ಮಾನವೀಯತೆಯ ಉದಾಹರಣೆಯಾಗಿದ್ದು, ಇದರ ಸದುಪಯೋಗವನ್ನು ಹಲವರು ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಯುಎಇಯಲ್ಲಿ ಬಹಳಷ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಅಹ್ಮದ್ ಅಲ್ ಮರಿ, ತಂದೆಯ ಸೂಕ್ತ ದಾಖಲೆಗಳಿಲ್ಲದ ಯುಎಇಯಲ್ಲಿ ಜನಿಸಿದ ಹಲವು ಮಕ್ಕಳ ವ್ಯಾಕ್ಸಿನೇಶನ್ ಸಮಸ್ಯೆ ಸಹಿತ ಹಲವು ಸಮಸ್ಯೆಗಳನ್ನು ಪರಿಹರಿಸಿದೆ ಎಂದು ತಿಳಿಸಿದ್ದಾರೆ.

Hot this week

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

ಕನ್ನಡ ಸಂಘ ಬಹರೈನ್‌ನಿಂದ ಆರೋಗ್ಯ ದಿನ; ಉಚಿತ ವೈದ್ಯಕೀಯ ಶಿಬಿರ

ಬಹರೈನ್: ಕನ್ನಡ ಸಂಘ ಬಹರೈನ್ ವತಿಯಿಂದ ಅಲ್ ಹಿಲಾಲ್ ಹೆಲ್ತ್ ಕೇರ್...

ಕರ್ನಾಟಕ ಸಂಘ ಖತರ್‌ಗೆ ನೂತನ ಆಡಳಿತ ಸಮಿತಿ ಆಯ್ಕೆ; 2026–2028 ಅವಧಿಗೆ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ...

Related Articles

Popular Categories