ಇತರೆಹಜ್ ಯಾತ್ರೆಯ ಸಂದರ್ಭ 1,300 ಮಂದಿ ಮೃತ್ಯು: ವರದಿ

ಹಜ್ ಯಾತ್ರೆಯ ಸಂದರ್ಭ 1,300 ಮಂದಿ ಮೃತ್ಯು: ವರದಿ

ರಿಯಾದ್ : ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಬಿಸಿಲ ಬೇಗೆ ಹಾಗೂ ಶಾಖ ಸಂಬಂಧಿತ ಸಮಸ್ಯೆಗಳಿಂದ 1,300ಕ್ಕೂ ಅಧಿಕ ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸೌದಿ ಅರೆಬಿಯಾ ಸೋಮವಾರ ದೃಢಪಡಿಸಿದೆ.

ಸಾವನ್ನಪ್ಪಿದವರಲ್ಲಿ ಅಮೆರಿಕ, ಇಂಡೊನೇಶ್ಯಾ, ಭಾರತ, ಈಜಿಪ್ಟ್, ಜೋರ್ಡಾನ್ ಸೇರಿದಂತೆ 10 ದೇಶಗಳ ಯಾತ್ರಾರ್ಥಿಗಳು ಸೇರಿದ್ದಾರೆ. `ಈ ವರ್ಷ 1,75,000 ಭಾರತೀಯರು ಹಜ್‍ಗೆ ಭೇಟಿ ನೀಡಿದ್ದು ಯಾತ್ರೆಯ ಸಂದರ್ಭ ನೈಸರ್ಗಿಕ ಕಾರಣಗಳಿಂದ 98 ಭಾರತೀಯರು ಮರಣ ಹೊಂದಿದ್ದಾರೆ’ ಎಂದು ಭಾರತದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಕಳೆದ ವಾರ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದರು. ಹವಾಮಾನ ಬದಲಾವಣೆಯಿಂದ ಹಜ್ ಯಾತ್ರಾರ್ಥಿಗಳು ತೀವ್ರ ಪರಿಣಾಮ ಎದುರಿಸುತ್ತಿದ್ದಾರೆ. ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಸ್ಥಳದಲ್ಲಿ ಪ್ರತೀ ದಶಕದಲ್ಲಿ 0.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿದೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories