ಯುಎಇಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್.) ಅಬುಧಾಬಿ ಝೋನ್ ವತಿಯಿಂದ ಆಯೋಜಿಸಲ್ಪಡುವ ವಿಶ್ವ ಪ್ರವಾದಿ ಪೈಗಂಬರ್(ಸ.)ರ 1499ನೇ ಮೀಲಾದ್ ಸಮಾವೇಶದ ಯಶಸ್ವಿಗೆ ಸ್ವಾಗತ ಸಮಿತಿಯನ್ನು ಇತ್ತೀಚೆಗೆ ಅಬುಧಾಬಿ ಕೆಸಿಎಫ್ ಸಭಾಭವನದಲ್ಲಿ ರಚಿಸಲಾಯಿತು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಜಿ ಜಲ್ಲಿ, ಕನ್ವೀನರ್ ರಾಗಿ ಉಮರ್ ಈಶ್ವರಮಂಗಲ, ಕೋಶಾಧಿಕಾರಿಯಾಗಿ ಸಿದ್ದೀಕ್ ಎನ್.ಕೆ., ಸಲಹೆಗಾರರಾಗಿ ಅಬ್ದುಲ್ ಹಮೀದ್ ಸಅದಿ, ಪಿ.ಒಂ.ಎಚ್ ಈಶ್ವರಮಂಗಲ, ಇಬ್ರಾಹೀಂ ಸಖಾಫಿ ಕೆದುಂಬಾಡಿ, ಕೆ.ಎಚ್.ಸಖಾಫಿ ಈಶ್ವರಮಂಗಲ, ಹಾಜಿ ಮುಹಮ್ಮದ್ ಅಲಿ ವಳವೂರ್, ಇಬ್ರಾಹೀಂ ಬ್ರೈಟ್ ಮಾರ್ಬಲ್, ಇಕ್ಬಾಲ್ ಕುಂದಾಪುರ. ಕಾರ್ಯ ನಿರ್ವಾಹಕರಾಗಿ ಮುಹಮ್ಮದ್ ಹಸನ್ ಹಾಜಿ, ಸಿದ್ದೀಕ್ ಕೆ.ಎಚ್. ಇತರ ಕಾರ್ಯಕ್ರಮದ ಯಶಸ್ವಿಗಾಗಿ ಹಕೀಂ ತುರ್ಕಳಿಕೆ, ಹಸೈನಾರ್ ಅಮಾನಿ ಅಜ್ಜಾವರ, ಕಬೀರ್ ಬಾಯಂಬಾಡಿ, ನವಾಝ್ ಹಾಜಿ, ಹಾರಿಸ್ ಸಅದಿ, ಅಶ್ರಫ್ ಮುಸ್ಲಿಯಾರ್ ಕನ್ಯಾಡಿ, ನಿಝಾರ್ ಕುಂಬ್ಳೆ, ಇಂಜಿನಿಯರ್ ಅರ್ಶದ್, ಶರೀಫ್ ಕಾಜೂರ್, ಫಾರೂಕ್ ಸಖಾಫಿ, ಹಾಫಿಲ್ ಸಈದ್ ಹನೀಫಿ, ಅಮೀರ್ ಚಿಕ್ಕಮಗಳೂರು, ಮುಸ್ತಫ ಸಖಾಫಿ, ರಜಬ್ ನಾವುಂದ, ಶರೀಫ್ ಬೊಳ್ಮಾರ್, ಸುಹೈಲ್ ಬಜ್ಪೆ, ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಹಿದಾಯತ್ ಕೊಡಗು ಒಳಗೊಂಡ ಮೀಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

‘ಮುತ್ತು ನಬಿ ಮನುಕುಲದ ಮಾರ್ಗದರ್ಶಿ’ ಎಂಬ ಶೀರ್ಷಿಕೆಯೊಂದಿಗೆ ಸೆಪ್ಟಂಬರ್ 8ರಂದು ಸಂಜೆ ಅಬುಧಾಬಿ ನಗರದ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಯುವ ಮೀಲಾದ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಕೇರಳದ ಧಾರ್ಮಿಕ ವಿದ್ವಾಂಸ ಸೈಯದ್ ಅಬ್ದುರ್ರಹ್ಮಾನ್ ಆಟ್ಟೀರಿ ತಂಙಳ್ ಭಾಗವಹಿಸುವರು. ಅವರಲ್ಲದೇ, ಸಾಮಾಜಿಕ ಧಾರ್ಮಿಕ ಮತ್ತು ಉದ್ಯಮ ಕ್ಷೇತ್ರದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕೆಸಿಎಫ್ ಪ್ರಕಟನೆ ತಿಳಿಸಿದೆ.

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories