ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಯುಎಇಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆ-ಗಾಳಿ; ರಾಸ್ ಅಲ್ ಖೈಮಾದಲ್ಲಿ ಕೇರಳ ಮೂಲದ ಯುವಕ ಮೃತ್ಯು

ದುಬೈ: ಗುರುವಾರ ಮುಂಜಾನೆಯಿಂದ ಯುಎಇಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ-ಗಾಳಿಗೆ ಭಾರತೀಯ ಮೂಲದ...

ಬಹರೈನ್‌ನಲ್ಲಿ ಡಿ.19ರಂದು ಉಡುಪಿ ಪ್ರಜ್ಞಾನಂ ತಂಡದಿಂದ ‘ಹೆಜ್ಜಗೊಲಿದ ಬೆಳಕು’ ನಾಟಕ ಪ್ರದರ್ಶನ

ಬಹರೈನ್: ಬಹರೈನ್‌ನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಪ್ರಜ್ಞಾನಂ ಟ್ರಸ್ಟ್ (ರಿ)ನಿರ್ಮಿಸಿದ...

ದುಬೈ; ಅದ್ದೂರಿಯಾಗಿ ನಡೆದ ಯುಎಇ ಬಂಟ್ಸ್‌ನ 48ನೇ ವರ್ಷದ ಕೂಡುಕಟ್ಟ್ ‘ಭಾವೈಕ್ಯ’ ಬಂಟರ ಸಮಾಗಮ

​ದುಬೈ: ಇಲ್ಲಿನ ಶೇಖ್ ಝಾಯೆದ್ ರಸ್ತೆಯಲ್ಲಿರುವ ಮಿಲೆನಿಯಂ ಪ್ಲಾಝಾ ಹೋಟೆಲ್‌ನ ಸಭಾಂಗಣದಲ್ಲಿ...

Al Qamar Moolur Family fest held in Umm Al Quwain

Umm Al Quwain: Al Qamar Moolur Family Fest 2025...

ಕಲಾದರ್ಪಣ 2025: ಕುವೈತ್ ಕನ್ನಡ ಕೂಟದ ಅದ್ದೂರಿ ರಾಜ್ಯೋತ್ಸವ; ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿಯ ಸಮ್ಮಿಲನ

ಕುವೈತ್: ಕುವೈತ್ ಕನ್ನಡ ಕೂಟ ಒಂದು ಸಾಮಾಜಿಕ-ಸಾಂಸ್ಕೃತಿಕ ಸಂಘಟನೆ, 41 ವರ್ಷಗಳಿಂದ...

Related Articles

Popular Categories