ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ದುಬೈನಲ್ಲಿ ‘ಗಂಧರ್ವ ಗಮಕ ಶಾಲೆ’ ಉದ್ಘಾಟನೆ

ದುಬೈ: ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ಅವರ ಶಿಷ್ಯ ಪರಂಪರೆಯನ್ನು ಮುಂದುವರಿಸುವ ಮಹತ್ವದ...

ದುಬೈಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ

ದುಬೈ: ಅರಬ್ ಸಂಯುಕ್ತ ಸಂಸ್ಥಾನ ವಾಣಿಜ್ಯ ನಗರಿ ದುಬೈಯಲ್ಲಿ ಸಾಮೂಹಿಕ ಶ್ರೀ...

ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ ‘ಸ್ನೇಹ ಸಂಗಮ’ ಕಾರ್ಯಕ್ರಮ

ಸಲಾಲ(ಒಮಾನ್): ಇಲ್ಲಿನ ಅನಿವಾಸಿ ಕನ್ನಡಿಗರ ಅನ್ನೂರ್ ಎಜುಕೇಶನಲ್ ಸೆಂಟರ್ ವತಿಯಿಂದ 'ಸ್ನೇಹ...

ವಿಶ್ವದಲ್ಲೇ ಮೊದಲ ಬಾರಿ ಜರ್ಮನ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಸಿದ್ಧತೆ

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಕರಾವಳಿ ಕರ್ನಾಟಕದ ಜನಪ್ರಿಯ ಕಲೆಯಾಗಿರುವ ಯಕ್ಷಗಾನವು...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ...

Related Articles

Popular Categories