ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories