ಯುಎಇಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬ್ದುಲ್ಲ ಮಾದುಮೂಲೆಗೆ ಅಬುಧಾಬಿಯಲ್ಲಿ ಅದ್ಧೂರಿ ಬೀಳ್ಕೊಡುಗೆ

ಅಬುಧಾಬಿ: ಇಪ್ಪತ್ತೈದು ವರ್ಷಗಳ ದೀರ್ಘಕಾಲ ಅನಿವಾಸಿ ಜೀವನವನ್ನು ಕೊನೆಗೊಳಿಸಿ ತಾಯ್ನಾಡಿಗೆ ಮರಳುತ್ತಿರುವ ಸಾಮಾಜಿಕ ಮುಂದಾಳು, ಝಾಎದ್ ಫೌಂಡೇಶನ್ ಅಬುಧಾಬಿ ಇದರ ಆರ್ಥಿಕ ತಜ್ಞ , ಇಂಡಿಯನ್ ಸ್ಕೂಲ್ ಅಬುಧಾಬಿ ಇದರ ಬೋರ್ಡ್ ಸದಸ್ಯರೂ ಆಗಿದ್ದ ಅಬ್ದುಲ್ಲ ಮಾದುಮೂಲೆಯವರಿಗೆ ಅನಿವಾಸಿ ಕನ್ನಡಿಗ ಸಂಘಟನೆಯಾದ ಕೆಸಿಎಫ್ ಯುಎಇ ಇದರ ವತಿಯಿಂದ ಅದ್ಧೂರಿ ಬೀಳ್ಕೊಡುಗೆ ಸಮಾರಂಭವನ್ನು ಕೆಸಿಎಫ್ ಅಬುಧಾಬಿ ಕಚೇರಿಯಲ್ಲಿ ನಡೆಸಲಾಯ್ತು.

ಹಸೈನಾರ್ ಅಮಾನಿಯವರ ಅಧ್ಯಕ್ಷತೆಯಲ್ಲಿ ಪ್ರಾರಂಭಗೊಂಡ ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತರ್‌ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಅಬ್ದುಲ್ ಹಮೀದ್ ಪಿಎಂಎಚ್, ಹಕೀಂ ತುರ್ಕಳಿಕೆ, ಕೆ ಎಚ್ ಸಖಾಫಿ ಮೊದಲಾದವರು ಮಾತನಾಡಿದರು.

ಸಂಘಟನೆಯ ಗೌರವ ಸ್ಮರಣಕೆಗಳನ್ನು ಸ್ವೀಕರಿಸಿದ ಅಬ್ದುಲ್ಲ ಮಾದುಮೂಲೆಯವರು ಕೆಸಿಎಫ್ ನ ಸಾಮಾಜಿಕ ಸಾಂಸ್ಕೃತಿಕ ಸೇವಾ ಚಟುವಟಿಕೆಯೊಂದಿಗಿನ ಅಭಿಮಾನವನ್ನು ಹಾಗೂ ಉತ್ತರ ಕರ್ನಾಟಕದಲ್ಲಿ ನಡೆಸಿಕೊಂಡು ಬರುತ್ತಿರುವ ಶೈಕ್ಷಣಿಕ ಕ್ರಾಂತಿಯನ್ನೂ ಅಭಿನಂದಿಸಿ ಮಾತನಾಡಿದರು. ಅದೇ ರೀತಿ ಸಮುದಾಯದ ಹಕ್ಕುಗಳ ರಕ್ಷಣೆಗೆ ವಿದ್ಯಾಭ್ಯಾಸ ಒಂದೇ ದಾರಿ, ಆದುದರಿಂದ ಯುವ ಸಮೂಹವು ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕಾಗಿದೆ ಎಂದರು.

ಕಬೀರ್ ಬಾಯಂಬಾಡಿ ಸ್ವಾಗತಿಸಿದರು. ಉಮರ್ ಈಶ್ವರಮಂಗಲ ವಂದಿಸಿದರು.

Hot this week

ದೋಹಾದಲ್ಲಿ ಕರ್ನಾಟಕ ಸಂಘ ಖತರ್‌ನಿಂದ ಕಾರ್ಮಿಕ ದಿನ 2026 ಆಚರಣೆ

ದೋಹಾ(ಖತರ್): ಕರ್ನಾಟಕ ಸಂಘ ಖತರ್ (KSQ), ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)...

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

Related Articles

Popular Categories