ಕುವೈತ್ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ...

ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತ್ಯು

ಕುವೈತ್‌: ಕುವೈತ್‌ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಮ್ಯಾಥ್ಯೂ ಮುಝಕ್ಕಲ್‌, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್‌ ಮತ್ತು ಎರಿನ್‌ ಎಂದು ಗುರುತಿಸಾಗಿದೆ.

ರಜೆಯನ್ನು ತಮ್ಮ ಊರಾದ ನೆಡುಂಬಸ್ಸೆರಿಯಲ್ಲಿ ಕಳೆದು ಗುರುವಾರ ರಾತ್ರಿಯಷ್ಟೇ ಕುಟುಂಬ ಕುವೈತ್‌ಗೆ ಮರಳಿತ್ತು. ಮ್ಯಾಥ್ಯೂ ಕುವೈತ್‌ನಲ್ಲಿ 15 ವರ್ಷಗಳಿಂದ ಉದ್ಯೋಗದಲ್ಲಿದ್ದರು. ಪತ್ನಿ ನರ್ಸ್‌ ಆಗಿದ್ದರು, ಮಕ್ಕಳೂ ಕುವೈತ್‌ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕೊಠಡಿಯಲ್ಲಿದ್ದ ಎಸಿಯಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories