ಕುವೈತ್ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ...

ಕುವೈತ್‌: ಅಗ್ನಿ ಅವಘಡದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಮೃತ್ಯು

ಕುವೈತ್‌: ಕುವೈತ್‌ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಮ್ಯಾಥ್ಯೂ ಮುಝಕ್ಕಲ್‌, ಅವರ ಪತ್ನಿ ಲಿನಿ ಅಬ್ರಹಾಂ ಮತ್ತು ಮಕ್ಕಳಾದ ಐಸಾಕ್‌ ಮತ್ತು ಎರಿನ್‌ ಎಂದು ಗುರುತಿಸಾಗಿದೆ.

ರಜೆಯನ್ನು ತಮ್ಮ ಊರಾದ ನೆಡುಂಬಸ್ಸೆರಿಯಲ್ಲಿ ಕಳೆದು ಗುರುವಾರ ರಾತ್ರಿಯಷ್ಟೇ ಕುಟುಂಬ ಕುವೈತ್‌ಗೆ ಮರಳಿತ್ತು. ಮ್ಯಾಥ್ಯೂ ಕುವೈತ್‌ನಲ್ಲಿ 15 ವರ್ಷಗಳಿಂದ ಉದ್ಯೋಗದಲ್ಲಿದ್ದರು. ಪತ್ನಿ ನರ್ಸ್‌ ಆಗಿದ್ದರು, ಮಕ್ಕಳೂ ಕುವೈತ್‌ನ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಕೊಠಡಿಯಲ್ಲಿದ್ದ ಎಸಿಯಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories