ಕುವೈತ್ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಕಲಬುರಗಿಯ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು: ‘ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಸೂಚನೆ ನೀಡಿದ್ದಾರೆ.

ಕುವೈತ್ ಅಗ್ನಿ ದುರಂತ ಮೃತಪಟ್ಟಿರುವ ಕೇರಳ ನಿವಾಸಿಗಳ ಕುಟಂಬಕ್ಕೆ ಅಲ್ಲಿನ ಸರಕಾರ  5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಅದರಂತೆಯೇ ಕರ್ನಾಟಕ ಸರಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

‘ಭಾರತೀಯರು ಕೆಲಸ ಆರಿಸಿ ಗಲ್ಸ್ ರಾಷ್ಟ್ರಗಳಿಗೆ ವಲಸೆ ಹೋಗುವುದು ಸಾಮಾನ್ಯ. ಜೂ.12ರಂದು ಕುವೈತ್ ಮಾಂಗಾಫ್‍ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 45 ಮಂದಿ ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದೆ’

ಡಾ.ಆರತಿ ಕೃಷ್ಣ ಉಪಾಧ್ಯಕ್ಷೆ ಅನಿವಾಸಿ ಭಾರತೀಯ ಸಮಿತಿ

Hot this week

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

ಫ್ಲೋರಿಡಾ ತುಳು ಕೂಟದ 5ನೇ ವಾರ್ಷಿಕೋತ್ಸವ: ಸಂಭ್ರಮದ ಪಿಕ್ನಿಕ್‌ನೊಂದಿಗೆ ಸಂಸ್ಕೃತಿಯ ಅನಾವರಣ

ಪೊಂಪಾನೋ ಬೀಚ್(ಫ್ಲೋರಿಡಾ): ಫ್ಲೋರಿಡಾ ತುಳು ಕೂಟವು ತನ್ನ ಐದನೇ ವರ್ಷದ ಸಂಭ್ರಮವನ್ನು...

Related Articles

Popular Categories