ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ಬಹರೈನ್ ಕನ್ನಡ ಸಂಘದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬಹರೈನ್: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಗ್ಗೆ 8:30ಕ್ಕೆ...

ಬಹರೈನ್ ರೇಡಿಯೋ ಆರ್ ಜೆ ಕಮಲಾಕ್ಷ ಅಮೀನ್​ಗೆ ‘ಗೋಲ್ಡನ್ ಐಕಾನಿಕ್ ಅವಾರ್ಡ್’ ಗೌರವ ಪ್ರಶಸ್ತಿ

ಮಂಗಳೂರು: ಬಹರೈನ್ ನ ಕಸ್ತೂರಿ ಕನ್ನಡ ಎಫ್ಎಂ ರೇಡಿಯೋ ಆರ್ ಜೆ...

ಮಸ್ಕತ್‌ನಲ್ಲಿ ‘ಕನ್ನಡ ಭವನ’ ನಿರ್ಮಾಣಕ್ಕೆ ಕರ್ನಾಟಕ ಸರಕಾರದಿಂದ ಆರ್ಥಿಕ ನೆರವು ಬೇಕು: ‘ಮಸ್ಕತ್ ಕನ್ನಡ ಸಂಘ’ದ ಅಧ್ಯಕ್ಷ ಮಂಜುನಾಥ್ ಸಂಗಟಿ

ವಿಶೇಷ ಸಂದರ್ಶನ; ಎಂ.ಇಕ್ಬಾಲ್ ಉಚ್ಚಿಲ, ದುಬೈ ನಿಸರ್ಗ ನಿರ್ಮಿತ ರಮ್ಯ ಮನೋಹರ ತಾಣವಾಗಿರುವ...

Related Articles

Popular Categories