ಕುವೈತ್ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ...

ಕುವೈತ್ ಅಗ್ನಿ ದುರಂತ | ಮೃತ ಬಿನೋಯ್ ಕುಟುಂಬಕ್ಕೆ ವಸತಿ ಯೋಜನೆಯಡಿ ಮನೆ ವಿತರಣೆ: ಕೇರಳ ಸರಕಾರ ಭರವಸೆ

ತ್ರಿಶೂರ್ (ಕೇರಳ): ಇತ್ತೀಚೆಗೆ ಕುವೈತ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ ಬಿನೋಯ್ ಥಾಮಸ್ ಕುಟುಂಬದ ಸದಸ್ಯರಿಗೆ ಲೈಫ್ ಮಿಷನ್ ವಸತಿ ಯೋಜನೆಯಡಿ ಮನೆ ವಿತರಿಸುವುದಾಗಿ ರವಿವಾರ ಕೇರಳ ಸರಕಾರ ಭರವಸೆ ನೀಡಿದೆ.

ತನ್ನ ಕುಟುಂಬದ ಸದಸ್ಯರಿಗೆ ಉತ್ತಮ ಮನೆ ನಿರ್ಮಿಸುವ ಹಾಗೂ ಅವರ ಜೀವನ ಮಟ್ಟವನ್ನು ಸುಧಾರಿಸುವ ಕನಸಿನೊಂದಿಗೆ ಅಗ್ನಿ ದುರಂತ ಸಂಭವಿಸಿದ ಕೇವಲ ಒಂದು ದಿನದ ಹಿಂದೆಯಷ್ಟೆ ಚವಕ್ಕಡ್ ನಿವಾಸಿಯಾದ ಬಿನೋಯ್ ಥಾಮಸ್ ಕುವೈತ್ ಗೆ ತೆರಳಿದ್ದರು ಎಂದು ಹೇಳಲಾಗಿದೆ.

ಸದ್ಯ ಮೂರು ಸೆಂಟ್ ಅಳತೆಯ ಜಾಗದಲ್ಲಿ ಥಾಮಸ್ ಕುಟುಂಬವು ತಾತ್ಕಾಲಿಕ ಗುಡಿಸಿಲಿನಲ್ಲಿ ವಾಸಿಸುತ್ತಿದೆ.

ಕೇರಳ ಕಂದಾಯ ಸಚಿವ ಕೆ.ರಾಜನ್ ಹಾಗೂ ಸಾಮಾಜಿಕ ನ್ಯಾಯ ಸಚಿವೆ ಆರ್.ಬಿಂದು ಇಬ್ಬರೂ ರವಿವಾರ ಥಾಮಸ್ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.

ಜೂನ್ 12ರಂದು ಕುವೈತ್ ನ ಅಲ್ ಮಂಗಾಫ್ ನಗರದಲ್ಲಿನ ಕಟ್ಟಡವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ 45 ಮಂದಿ ಭಾರತೀಯರು ಎಂದು ಅವರು ಹೇಳಿದ್ದಾರೆ.

Hot this week

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

ಫ್ಲೋರಿಡಾ ತುಳು ಕೂಟದ 5ನೇ ವಾರ್ಷಿಕೋತ್ಸವ: ಸಂಭ್ರಮದ ಪಿಕ್ನಿಕ್‌ನೊಂದಿಗೆ ಸಂಸ್ಕೃತಿಯ ಅನಾವರಣ

ಪೊಂಪಾನೋ ಬೀಚ್(ಫ್ಲೋರಿಡಾ): ಫ್ಲೋರಿಡಾ ತುಳು ಕೂಟವು ತನ್ನ ಐದನೇ ವರ್ಷದ ಸಂಭ್ರಮವನ್ನು...

Related Articles

Popular Categories