ಬಹರೈನ್ಕೆಸಿಎಫ್ ಬಹರೈನ್: ಭಾರತದ 78ನೇ ಸ್ವಾತಂತ್ರ್ಯೋತ್ಸವ ಸಂಗಮ

ಕೆಸಿಎಫ್ ಬಹರೈನ್: ಭಾರತದ 78ನೇ ಸ್ವಾತಂತ್ರ್ಯೋತ್ಸವ ಸಂಗಮ

ಮನಾಮ: “ವೈವಿಧ್ಯತೆ ನಮ್ಮ ದೇಶದ ಆತ್ಮ” ಎಂಬ ಘೋಷ ವಾಕ್ಯದೊಂದಿಗೆ ಭಾರತದ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವು ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಅಧ್ಯಕ್ಷತೆಯಲ್ಲಿ ಕೆಸಿಎಫ್ ಸೆಂಟ್ರಲ್ ಕಚೇರಿ ಗುದೈಬಿಯಾದಲ್ಲಿ ನಡೆಯಿತು.

ಕೆಸಿಎಫ್ ಮನಾಮ ಸೆಕ್ಟರ್ ಅಧ್ಯಕ್ಷರಾದ ಅಹ್ಮದ್ ಉಸ್ತಾದ್ ದುಆ ಗೈದರು. ದಾರುಲ್ ಹುದಾ ತಂಬಿನಮಕ್ಕಿ ಸ್ಥಾಪನೆಯ ಸಾರಥಿ‌ ಖಲೀಲ್ ಹಿಮಮಿ ಸಖಾಫಿ ಕೊಟ್ಟಮುಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜಮಾಲುದ್ದೀನ್ ವಿಟ್ಲ ಅಧ್ಯಕ್ಷೀಯ ಭಾಷಣ ಮಾಡಿದರು.

ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ಸ್ವಾತಂತ್ರ್ಯೋತ್ಸವದ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಅನಿವಾಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ರಾಜ್ ಕುಮಾರ್ ಹಾಗೂ ರಮೇಶ್ ರಾಮಚಂದ್ರನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕೆಸಿಎಫ್ ಗುದೈಬಿಯಾ ಸೆಕ್ಟರ್ ಉಪಾಧ್ಯಕ್ಷರಾದ ಶಿಹಾಬ್ ಉಸ್ತಾದ್ ಪರಪ್ಪ ಹಾಗೂ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆ ಅಧ್ಯಕ್ಷ ಖಲಂದರ್ ಉಸ್ತಾದ್ ಶುಭ ಹಾರೈಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ ಸ್ವಾಗತಿಸಿದರು. ರಾಷ್ಟ್ರೀಯ ಸಮಿತಿ ಪಬ್ಲಿಕೇಶನ್ ವಿಂಗ್ ಅಧ್ಯಕ್ಷ‌ ಲತೀಫ್ ಪೆರೋಲಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅಶ್ರಫ್ ರೆಂಜಾಡಿ ರಾಷ್ಟ್ರ ಗೀತೆ ಹಾಡಿದರು. ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಸೂಫಿ ಪೈಂಬಚ್ಚಾಲ್ ಧನ್ಯವಾದ ಸಮರ್ಪಿಸಿದರು.

Hot this week

ಯಕ್ಷಗಾನ ಕಲಾವಿದ ವಾಸು ಬಾಯರುಗೆ ‘ವಿಶೇಷ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ’

ದುಬೈ : ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU)ಯು ತವರೂರು ತಿರುಗಾಟದಲ್ಲಿ...

ಕನ್ನಡ ಸಂಘ ಬಹರೈನ್ ವತಿಯಿಂದ ಯಶಸ್ವಿಯಾಗಿ ಮೂಡಿಬಂದ ‘KSB ಐಕ್ಯತಾ ಪಾದಯಾತ್ರೆ ಹಾಗೂ ನಿಷ್ಠಾ ಪ್ರತಿಜ್ಞೆ ಸಹಿ’ ಕಾರ್ಯಕ್ರಮ

ಮನಾಮ(ಬಹರೈನ್): ಕನ್ನಡ ಸಂಘ ಬಹರೈನ್ ವತಿಯಿಂದ ವಾಟರ್ ಗಾರ್ಡನ್, ಗುಫೂಲ್ ನಲ್ಲಿ...

ಖತರ್‌ನ ಸ್ಥಳೀಯ ಶಾಲೆಗಳಲ್ಲಿ ಕನ್ನಡ ಭಾಷೆ ಅನುಷ್ಠಾನಕ್ಕೆ ಭಾರತೀಯ ರಾಯಭಾರ ಕಚೇರಿಯ ಸಂಪೂರ್ಣ ಆಡಳಿತಾತ್ಮಕ ಬೆಂಬಲ: ಹರೀಶ್ ಪಾಂಡೆ

ದೋಹಾ: ಖತರ್‌ನಲ್ಲಿರುವ ಕನ್ನಡ ಮಾತನಾಡುವ ಅನಿವಾಸಿ ಭಾರತೀಯರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ...

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

Related Articles

Popular Categories