ಖತರ್ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ಖತರ್ ಪ್ರಧಾನಿ ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

ದೋಹ : ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ ಖತರ್ ಪ್ರಧಾನಿ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಾಸಿಮ್ ಅಲ್‍ಥಾನಿಯನ್ನು ಭೇಟಿ ಮಾಡಿದ್ದು ಉಭಯ ನಾಯಕರು ರಾಜಕೀಯ, ವ್ಯಾಪಾರ, ಹೂಡಿಕೆ, ಇಂಧನ, ತಂತ್ರಜ್ಞಾನ, ಸಂಸ್ಕøತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಕೇಂದ್ರೀಕರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ಖತರ್ ಗೆ ಒಂದು ದಿನದ ಭೇಟಿಗಾಗಿ ಆಗಮಿಸಿದ್ದ ಜೈಶಂಕರ್ ವಿದೇಶಾಂಗ ಖಾತೆಯನ್ನು ಹೊಂದಿರುವ ಮುಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಅವರೊಂದಿಗೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಭಾರತ-ಖತರ್ ಸಂಬಂಧಗಳ ಮತ್ತಷ್ಟು ವರ್ಧನೆ, ಮತ್ತು ಪರಸ್ಪರ ಹಿತಾಸಕ್ತಿಯ ವಿಷಯಗಳ ಕುರಿತು ನಿರಂತರ ಮಾತುಕತೆ ಮುಂದುವರಿಸಲು ಎರಡೂ ದೇಶಗಳು ಸಮ್ಮತಿಸಿವೆ ಎಂದು ಭಾರತದ ವಿದೇಶಾಂಗ ಇಲಾಖೆ `ಎಕ್ಸ್’ ಮಾಡಿದೆ.

Hot this week

ಅಮೇರಿಕದಲ್ಲಿ ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಅಬ್ಬರ! ಸಿನೆಮಾ ನೋಡಿದವರು ಏನೆಂದಿದ್ದಾರೆ ನೋಡಿ…!

ನ್ಯೂಯಾರ್ಕ್: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಎಲ್ಲೆಡೆ ಬಿಡುಗಡೆಗೊಂಡಿದ್ದು, ಅಮೇರಿಕದ ನ್ಯೂಯಾರ್ಕ್...

ಅದ್ದೂರಿಯಾಗಿ ನಡೆದ ಕರ್ನಾಟಕ ಸಂಘ ಖತರ್‌ನ ‘ಎಂಜಿನಿಯರ್ಸ್ ಡೇ’

ದೋಹಾ(ಖತರ್): ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ...

Related Articles

Popular Categories