ಯುಎಇಯುಎಇ: ಡಿ.31ಕ್ಕೆ ಸಾರ್ವಜನಿಕ ಕ್ಷಮಾಪಣೆ ಅಂತ್ಯ

ಯುಎಇ: ಡಿ.31ಕ್ಕೆ ಸಾರ್ವಜನಿಕ ಕ್ಷಮಾಪಣೆ ಅಂತ್ಯ

4 ತಿಂಗಳ ಅಭಿಯಾನದಲ್ಲಿ ಹಲವು ಅನಿವಾಸಿಯರಿಗೆ ಲಾಭ


ದುಬೈ/ ಯುಎಇ: ಕಳೆದ ನಾಲ್ಕು ತಿಂಗಳಿನಿಂದ ಯುಎಇಯಲ್ಲಿದ್ದ ಸಾರ್ವಜನಿಕ ಕ್ಷಮಾಪಣೆ ಅಭಿಯಾನ ಡಿ.31ಕ್ಕೆ ಅಂತ್ಯಗೊಳ್ಳಲಿದೆ. ಈ ಅವಧಿಯೊಳಗೆ ಸೂಕ್ತ ದಾಖಲೆಗಳಿಲ್ಲದ ಅನಿವಾಸಿಗರು ಶರಣಾಗುವ ಮೂಲಕ ಸ್ವಂತ ಊರಿಗೆ ಹಿಂದಿರುಗಬಹುದು. ಇಲ್ಲವೇ ದಾಖಲೆಗಳನ್ನು ಸರಿಪಡಿಸಬಹುದು ಎಂದು ದುಬೈಯ ಜಿಡಿಆರ್‌ಎಫ್‌ಎ ನಿರ್ದೇಶಕ ಜ.ಲೆ.ಜ.ಮುಹಮ್ಮದ್ ಅಹ್ಮದ್ ಅಲ್ ಮರಿ ಹೇಳಿದ್ದಾರೆ.
ಸಾರ್ವಜನಿಕ ಕ್ಷಮಾಪಣೆ ಅವಧಿ ಮುಗಿದ ಬಳಿಕ ಕಾನೂನು ಉಲ್ಲಂಘಿಸಿ ನೆಲೆಸಿರುವವರನ್ನು ಪತ್ತೆಹಚ್ಚಿಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.
ಈ ನಾಲ್ಕು ತಿಂಗಳ ಕ್ಷಮಾಪಣ ಕಾಲಾವಧಿಯು ಯುನೈಟಡ್ ಅರಬ್ ಎಮಿರೇಟ್ಸ್‌ನ ಮಾನವೀಯತೆಯ ಉದಾಹರಣೆಯಾಗಿದ್ದು, ಇದರ ಸದುಪಯೋಗವನ್ನು ಹಲವರು ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಯುಎಇಯಲ್ಲಿ ಬಹಳಷ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಅಹ್ಮದ್ ಅಲ್ ಮರಿ, ತಂದೆಯ ಸೂಕ್ತ ದಾಖಲೆಗಳಿಲ್ಲದ ಯುಎಇಯಲ್ಲಿ ಜನಿಸಿದ ಹಲವು ಮಕ್ಕಳ ವ್ಯಾಕ್ಸಿನೇಶನ್ ಸಮಸ್ಯೆ ಸಹಿತ ಹಲವು ಸಮಸ್ಯೆಗಳನ್ನು ಪರಿಹರಿಸಿದೆ ಎಂದು ತಿಳಿಸಿದ್ದಾರೆ.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories