ಯುಎಇಯುಎಇ: ಡಿ.31ಕ್ಕೆ ಸಾರ್ವಜನಿಕ ಕ್ಷಮಾಪಣೆ ಅಂತ್ಯ

ಯುಎಇ: ಡಿ.31ಕ್ಕೆ ಸಾರ್ವಜನಿಕ ಕ್ಷಮಾಪಣೆ ಅಂತ್ಯ

4 ತಿಂಗಳ ಅಭಿಯಾನದಲ್ಲಿ ಹಲವು ಅನಿವಾಸಿಯರಿಗೆ ಲಾಭ


ದುಬೈ/ ಯುಎಇ: ಕಳೆದ ನಾಲ್ಕು ತಿಂಗಳಿನಿಂದ ಯುಎಇಯಲ್ಲಿದ್ದ ಸಾರ್ವಜನಿಕ ಕ್ಷಮಾಪಣೆ ಅಭಿಯಾನ ಡಿ.31ಕ್ಕೆ ಅಂತ್ಯಗೊಳ್ಳಲಿದೆ. ಈ ಅವಧಿಯೊಳಗೆ ಸೂಕ್ತ ದಾಖಲೆಗಳಿಲ್ಲದ ಅನಿವಾಸಿಗರು ಶರಣಾಗುವ ಮೂಲಕ ಸ್ವಂತ ಊರಿಗೆ ಹಿಂದಿರುಗಬಹುದು. ಇಲ್ಲವೇ ದಾಖಲೆಗಳನ್ನು ಸರಿಪಡಿಸಬಹುದು ಎಂದು ದುಬೈಯ ಜಿಡಿಆರ್‌ಎಫ್‌ಎ ನಿರ್ದೇಶಕ ಜ.ಲೆ.ಜ.ಮುಹಮ್ಮದ್ ಅಹ್ಮದ್ ಅಲ್ ಮರಿ ಹೇಳಿದ್ದಾರೆ.
ಸಾರ್ವಜನಿಕ ಕ್ಷಮಾಪಣೆ ಅವಧಿ ಮುಗಿದ ಬಳಿಕ ಕಾನೂನು ಉಲ್ಲಂಘಿಸಿ ನೆಲೆಸಿರುವವರನ್ನು ಪತ್ತೆಹಚ್ಚಿಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಅವರು ತಿಳಿಸಿದ್ದಾರೆ.
ಈ ನಾಲ್ಕು ತಿಂಗಳ ಕ್ಷಮಾಪಣ ಕಾಲಾವಧಿಯು ಯುನೈಟಡ್ ಅರಬ್ ಎಮಿರೇಟ್ಸ್‌ನ ಮಾನವೀಯತೆಯ ಉದಾಹರಣೆಯಾಗಿದ್ದು, ಇದರ ಸದುಪಯೋಗವನ್ನು ಹಲವರು ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಯುಎಇಯಲ್ಲಿ ಬಹಳಷ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಅಹ್ಮದ್ ಅಲ್ ಮರಿ, ತಂದೆಯ ಸೂಕ್ತ ದಾಖಲೆಗಳಿಲ್ಲದ ಯುಎಇಯಲ್ಲಿ ಜನಿಸಿದ ಹಲವು ಮಕ್ಕಳ ವ್ಯಾಕ್ಸಿನೇಶನ್ ಸಮಸ್ಯೆ ಸಹಿತ ಹಲವು ಸಮಸ್ಯೆಗಳನ್ನು ಪರಿಹರಿಸಿದೆ ಎಂದು ತಿಳಿಸಿದ್ದಾರೆ.

Hot this week

Yakshagana staged in English for the first time in Europe, show held in Belgium

Brussels: Yakshagana, the traditional theatre form from coastal Karnataka,...

ದಮ್ಮಾಮ್‌ನಲ್ಲಿ ‘ಅಖ್ವಾ’ದಿಂದ ಅದ್ಧೂರಿ ‘ಫ್ಯಾಮಿಲಿ ಮುಲಾಖಾತ್’; ಸಂಭ್ರಮಿಸಿದ ಮಕ್ಕಳು, ಹಿರಿಯರು

ದಮ್ಮಾಮ್ (ಸೌದಿ ಅರೇಬಿಯಾ): ಇಲ್ಲಿನ ಮುಳೂರು ಜಮಾತ್‌ನ ಅನಿವಾಸಿ ಕನ್ನಡಿಗರ ಒಕ್ಕೂಟವಾದ...

ಅಮೇರಿಕ; ‘ಆಟಾ’ ವತಿಯಿಂದ ‘ಬಿಸು ಪರ್ಬ 2026’ ಆಚರಣೆ: ತುಳು ಲಿಪಿ ತರಗತಿಗೆ ಚಾಲನೆ

ಉತ್ತರ ಅಮೇರಿಕ: ಅಖಿಲ ಅಮೆರಿಕಾ ತುಳು ಅಸೋಸಿಯೇಷನ್ (ಆಟಾ) ವತಿಯಿಂದ ಏಪ್ರಿಲ್...

ಅಟ್ಲಾಂಟ ಕನ್ನಡಿಗರಿಂದ ಯುಗಾದಿ-ಹೊಸ ತೊಡಕು ಆಚರಣೆ

ಅಟ್ಲಾಂಟ ಕನ್ನಡಿಗರು ಯುಗಾದಿಯನ್ನು ಏಪ್ರಿಲ್ 11 ಹಾಗೂ ಹೊಸತೊಡಕು ಹಬ್ಬವನ್ನು ಏಪ್ರಿಲ್...

ಖತರ್‌ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

ದೋಹಾ(ಖತರ್):ಕರ್ನಾಟಕ ಸಂಘ ಖತರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು...

Related Articles

Popular Categories