ಸೌದಿ ಅರೇಬಿಯಾಹಜ್ ಯಾತ್ರೆ ವೇಳೆ 1301 ಮಂದಿ ಮೃತ್ಯು: ನೋಂದಾಯಿಸದ...

ಹಜ್ ಯಾತ್ರೆ ವೇಳೆ 1301 ಮಂದಿ ಮೃತ್ಯು: ನೋಂದಾಯಿಸದ ಯಾತ್ರಿಗಳೇ ಅಧಿಕ; ವರದಿ


ರಿಯಾದ್: ಈ ಬಾರಿಯ ಹಜ್ ಯಾತ್ರೆ ವೇಳೆ 1301 ಯಾತ್ರಾರ್ಥಿಗಳು ಬಿಸಿಲ ಝಳದಿಂದ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾ ಅಧಿಕೃತವಾಗಿ ಪ್ರಕಟಿಸಿದೆ. ಮೃತಪಟ್ಟವರಲ್ಲಿ ಶೇಕಡ 83ರಷ್ಟು ಮಂದಿ ಅನಧಿಕೃತ ಹಜ್ ಯಾತ್ರಿಗಳಾಗಿದ್ದು, ಹಜ್ ಯಾತ್ರೆ ಕೈಗೊಳ್ಳಲು ಅನುಮತಿ ಪಡೆದಿರಲಿಲ್ಲ. ಯಾವುದೇ ಸೂಕ್ತ ಆಸರೆ ಪಡೆಯದೇ ಸುಧೀರ್ಘ ಅಂತರವನ್ನು ಸುಡು ಬಿಸಿಲಲ್ಲಿ ಕಾಲ್ನಡಿಗೆಯಲ್ಲಿ ಕ್ರಮಿಸಿದ್ದರು ಎಂದು ಸೌದಿ ಪ್ರೆಸ್ ಏಜೆನ್ಸಿ ಹೇಳಿದೆ. ಕಳೆದ ವಾರ ಸಾವಿನ ಸಂಖ್ಯೆ 1100ನ್ನು ಮೀರಿದೆ ಎಂದು ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿತ್ತು.

ಈ ವರ್ಷದ ಹಜ್ ಯಾತ್ರೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ ಎಂದು ಸೌದಿ ಆರೋಗ್ಯ ಸಚಿವ ಫಹದ್ ಅಲ್ ಜಲಾಜಿಲ್ ಹೇಳಿದ್ದಾರೆ. ಸೌದಿ ಆರೋಗ್ಯ ಸೇವಾ ವಿಭಾಗ 4.65 ಲಕ್ಷ ಮಂದಿಗೆ ಸೇವೆ ಒದಗಿಸಿದೆ. ಹಜ್ ಯಾತ್ರೆ ಕೈಗೊಳ್ಳಲು ಅಧಿಕೃತ ಅನುಮತಿಯನ್ನು ಪಡೆಯದ 1.41 ಲಕ್ಷ ಮಂದಿಗೂ ಚಿಕಿತ್ಸಾ ಸೇವೆ ಒದಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ಬಾರಿ 18 ಲಕ್ಷ ಮಂದಿ ಯಾತ್ರೆ ಕೈಗೊಂಡಿದ್ದು, ಈ ಪೈಕಿ 16 ಲಕ್ಷ ಮಂದಿ ಹೊರದೇಶದವರು. ಈ ಬಾರಿ ಮಕ್ಕಾದಲ್ಲಿ ತಾಪಮಾನ 51.8 ಡಿಗ್ರಿ ತಲುಪಿತ್ತು ಎಂದು ಸೌದಿ ಅಧಿಕಾರಿಗಳು ಹೇಳಿದ್ದಾರೆ.

ಏತನ್ಮಧ್ಯೆ ಮಕ್ಕಾಗೆ ಅಕ್ರಮ ಯಾತ್ರೆ ಆಯೋಜಿಸದ್ದ ಆರೋಪದಲ್ಲಿ 16 ಪ್ರವಾಸೋದ್ಯಮ ಕಂಪನಿಗಳ ಲೈಸನ್ಸ್ ರದ್ದುಪಡಿಸಲಾಗಿದೆ ಎಂದು ಈಜಿಪ್ಟ್ ಪ್ರಧಾನಿ ಮುಸ್ತಾಫಾ ಮದ್ಬೋಲಿ ಪ್ರಕಟಿಸಿದ್ದಾರೆ. ಜತೆಗೆ ಈ ಸಂಸ್ಥೆಗಳ ವ್ಯವಸ್ಥಾಪಕರನ್ನು ಸಾರ್ವಜನಿಕ ಅಭಿಯೋಜಕರಿಗೆ ಒಪ್ಪಿಸಲಾಗಿದೆ ಎಂದು ವಿವರಿಸಿದ್ದಾರೆ.

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

Related Articles

Popular Categories