ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

DKSC ಕುವೈತ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾಗಿ ಅನ್ವರ್ ಸಾಹೇಬ್ ಕುಂಜಾಲ್ ಆಯ್ಕೆ

ಕುವೈತ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC), ಇದರ ಕುವೈತ್ ರಾಷ್ಟ್ರೀಯ...

ಕರ್ನಾಟಕ ಸಂಘ ಖತರ್‌ನಿಂದ ರಮಝಾನ್‌ ಸೇವಾ ಕಾರ್ಯ: ಇಫ್ತಾರ್ ಆಹಾರ ಕಿಟ್‌ಗಳ ವಿತರಣೆ

ಕರ್ನಾಟಕ ಸಂಘ ಖತರ್‌ (KSQ), ರಮಝಾನ್‌ ಮಾಸದ ಪವಿತ್ರ ಚಟುವಟಿಕೆಗಳ ಭಾಗವಾಗಿ...

ಅಟ್ಲಾಂಟ ಒಕ್ಕಲಿಗರ ಕೂಟದಿಂದ ಪ್ರಥಮ ಸಮಾವೇಶ

ಕೆ. ಆರ್. ಶ್ರೀನಾಥ್, ಅಟ್ಲಾಂಟ ಅಟ್ಲಾಂಟ: ಫೆಬ್ರವರಿ 22ರ ರವಿವಾರದಂದು ಅಟ್ಲಾಂಟದಲ್ಲಿ ನೆಲಸಿರುವ...

AIM India Forum Delegation Meets Indian Ambassador to UAE

Abu Dhabi: A delegation from AIM India Forum met...

Konkani movie ‘My Dear Father’ thrills audience in Kuwait with double premiere shows

Kuwait: The Konkani film My Dear Father was screened...

Related Articles

Popular Categories