ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಬಹರೈನ್: ಯಕ್ಷಗುರು ದೀಪಕ್ ರಾವ್ ಪೇಜಾವರರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಬಹರೈನ್: ಕಳೆದ ಒಂದು ದಶಕದಿಂದ ಬಹರೈನ್ ದ್ವೀಪರಾಷ್ಟ್ರದಲ್ಲಿ ನೆಲೆಸಿರುವ ಖ್ಯಾತ ಯಕ್ಷಗಾನ...

ನ್ಯೂಯಾರ್ಕ್ ಮೇಯರ್ ಆಗಿ ಭಾರತೀಯ ಮೂಲದ ಝೊಹ್ರಾನ್ ಮಮ್ದಾನಿ ಆಯ್ಕೆ ಸಂಭವ; ಗೆದ್ದರೆ, ಹಲವು ಇತಿಹಾಸ ಸೃಷ್ಟಿ!

ಜೂನ್ 24 ರಂದು ನಡೆದ ನ್ಯೂಯಾರ್ಕ್ ಮೇಯರ್ ಹುದ್ದೆಗೆ ಪಕ್ಷಗಳ ಅಭ್ಯರ್ಥಿಯ...

ಗಲ್ಫ್‌ನಲ್ಲಿ ಮತ್ತೆ ಕವಿದ ಯುದ್ಧದ ಕಾರ್ಮೋಡ; ವಲಸಿಗರನ್ನು ಕಾಡುತ್ತಿವೆ 1991ರ ಕೊಲ್ಲಿ ಯುದ್ಧದ ಕಹಿ ನೆನಪುಗಳು…!

ಇರಾನ್-ಇಸ್ರೇಲ್ ದಾಳಿಯಲ್ಲಿ ಅಮೇರಿಕ ನೇರವಾಗಿ ಭಾಗವಹಿಸುತ್ತಿರುವುದರಿಂದ , ಅಮೇರಿಕದ ಮಿತ್ರ ರಾಷ್ಟ್ರಗಳಾದ...

ಜೂನ್ 29ರಂದು ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದ ದಶಮಾನೋತ್ಸವ: 7 ಮಂದಿ ಸಾಧಕರಿಗೆ-ಮೂರು ಸಾಧಕ ಸಂಸ್ಥೆಗಳಿಗೆ ಸನ್ಮಾನ

ದುಬೈ:ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಕಾರ್ಯಕ್ರಮವು ಜೂನ್ 29ರಂದು...

Related Articles

Popular Categories