ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories