ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಎ.12ರಂದು ದುಬೈನಲ್ಲಿ ‘ಆಕ್ಮೆ’ಯಿಂದ ‘ಸ್ಯಾಂಡಲ್‌ವುಡ್ ಟು ಬಾಲಿವುಡ್’ ವಿಶೇಷ ಸಂಗೀತ, ನೃತ್ಯ, ಹಾಸ್ಯಮಯ ಕಾರ್ಯಕ್ರಮ

ದುಬೈ: ಖ್ಯಾತ ಗಾಯಕ ಹಾಗು ಉದ್ಯಮಿ ಆಗಿರುವ ದುಬೈಯ ‘ಆಕ್ಮೆ’ ಬಿಲ್ಡಿಂಗ್...

ದುಬೈಯಲ್ಲಿ ಸಂಭ್ರಮ, ಸಡಗರದ ಶ್ರೀರಾಮನವಮಿ ಆಚರಣೆ

ದುಬೈ: ರಾಮನವಮಿ ಪ್ರಯುಕ್ತ ಶಂಕರ ಸೇವಾ ಸಮಿತಿಯವರು ದುಬೈಯ ಭಕ್ತಾಧಿಗಳನ್ನೆಲ್ಲ ಸೇರಿಸಿಕೊಂಡು...

Prakash Godwin Pinto elected president of KCWA for 2025-27

Kuwait: The Kuwait Canara Welfare Association (KCWA) elected its...

AATA organize Tulu Script learning workshop in America

The All America Tulu Association (AATA), a nonprofit organization...

ಯುಎಇ, ಸೌದಿ, ಬಹರೈನ್, ಖತರ್, ಕುವೈತ್’ನಲ್ಲಿ ಸಂಭ್ರಮದ ಈದ್‌ ಉಲ್‌ ಫಿತ್ರ್ ಆಚರಣೆ

ದುಬೈ: ಯುಎಇ, ಸೌದಿ ಅರೇಬಿಯಾ, ಬಹರೈನ್, ಖತರ್, ಕುವೈತ್ ಸೇರಿದಂತೆ ಗಲ್ಫ್'ನಲ್ಲಿ...

Related Articles

Popular Categories