ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಯುಎಇಯ ಬಿಸಿಸಿಐ ಅಧ್ಯಕ್ಷರಾಗಿ ಹಿದಾಯತ್‌ ಅಡ್ಡೂರು ಪುನರಾಯ್ಕೆ; ಪ್ರಧಾನ ಕಾರ್ಯದರ್ಶಿಯಾಗಿ ಮುಷ್ತಾಕ್ ಕದ್ರಿ ಆಯ್ಕೆ

ದುಬೈ: ಯುಎಇಯ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ(BCCI) ಅಧ್ಯಕ್ಷರಾಗಿ...

ಇಂದು (ಜ.17) ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟದಿಂದ ‘ಹೊಸಬೆಳಕು’ ಕಾರ್ಯಕ್ರಮ; ಮೋಡಿ ಮಾಡಲಿದ್ದಾರೆ ರಾಜೇಶ್ ಕೃಷ್ಣನ್

ಅಮೇರಿಕ: ಫ್ಲೋರಿಡಾದ ಶ್ರೀಗಂಧ ಕನ್ನಡ ಕೂಟವು ಸಂಕ್ರಾಂತಿ ಹಿನ್ನೆಲೆಯಲ್ಲಿ ಇಂದು(ಜನವರಿ 17)...

ಭಾರತ ಸರಕಾರದ ಅಭಿನಂದನೆಗೆ ಪಾತ್ರವಾದ ‘ಕನ್ನಡ ಪಾಠ ಶಾಲೆ ದುಬೈ’; ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯಿಂದ ಗೌರವ

ದುಬೈ: ಯುಎಇ ಪ್ರವಾಸದಲ್ಲಿದ್ದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ...

ಕುವೈತ್‌ನ ನೇರಂಬಳ್ಳಿ ಸುರೇಶ್ ರಾವ್​​ಗೆ ‘ಸಮಾಜ ಸೇವಾ ರತ್ನ ಪ್ರಶಸ್ತಿ–2026’

ಕುವೈತ್: ಸಂಘಟಕ, ಕಲಾವಿದ, ಲೇಖಕ, ಸಮಾಜಸೇವಕ, ಕೋವಿಡ್ ವಾರಿಯರ್ ಆಗಿ ಸೇವೆ...

ದುಬೈನಲ್ಲಿ ಫೆಬ್ರವರಿ 22ರಂದು ‘ಯುಎಇ ಬಂಟ್ಸ್’ನಿಂದ ವಾರ್ಷಿಕ ‘ಸ್ಪೋರ್ಟ್ಸ್ ಡೇ-2026’

ದುಬೈ: ಯುಎಇ ಬಂಟ್ಸ್ ನ ವಾರ್ಷಿಕ "ಸ್ಪೋರ್ಟ್ಸ್ ಡೇ-2026" ಫೆಬ್ರವರಿ 22ರಂದು...

Related Articles

Popular Categories