ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories