ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

ಭಾರತೀಯ ರಾಯಭಾರ ಕಚೇರಿಯ ಡಾ.ಈಶ್ ಸಿಂಘಾಲ್​​ಗೆ ಭಾವಪೂರ್ಣ ಬೀಳ್ಕೊಡುಗೆ; ಕರ್ನಾಟಕ ಸಂಘ ಖತರ್‌ನಿಂದ ಅಭಿನಂದನೆ

ದೋಹಾ(ಖತರ್): ಖತರ್‌ನಲ್ಲಿ ತಮ್ಮ ಸೇವಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ರಾಯಭಾರ ಕಚೇರಿಯ...

ವಂದೇ ಮಾತರಂ ಮತ್ತು ಜನಗಣಮನ ಗೀತೆಯೊಂದಿಗೆ ಅಮೇರಿಕದಲ್ಲಿ ಗೃಹಪ್ರವೇಶ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ 1875ರಲ್ಲಿ ಭಾರತದಲ್ಲಿ ಮೊಳಗಿದ ‘ವಂದೇ ಮಾತರಂ’ 150...

ದುಬೈ; ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮ

ದುಬೈ: ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ...

ನ್ಯೂಯಾರ್ಕ್; ಆಲ್ಬನಿಯಲ್ಲಿ ಸಂಭ್ರಮದ ಕನ್ನಡ ಕಲಿ ಪದವಿ ಪ್ರದಾನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಆಲ್ಬನಿ(ನ್ಯೂಯಾರ್ಕ್): ಅಮೇರಿಕದಲ್ಲಿ ಹುಟ್ಟಿ ಬೆಳೆಯುತ್ತಿರುವ ಮಕ್ಕಳಿಗೆ ಕನ್ನಡ...

Related Articles

Popular Categories