ಯುಎಇದುಬೈ; ಅಕ್ಟೋಬರ್ 25ರಂದು '4ನೇ ದುಬೈ ಗಡಿನಾಡ ಉತ್ಸವ':...

ದುಬೈ; ಅಕ್ಟೋಬರ್ 25ರಂದು ‘4ನೇ ದುಬೈ ಗಡಿನಾಡ ಉತ್ಸವ’: ಲೋಗೋ ಬಿಡುಗಡೆ

ದುಬೈ: ಅಕ್ಟೋಬರ್ 25ರಂದು ದುಬೈನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದ ವತಿಯಿಂದ ನಡೆಯುವ 4ನೇ “ದುಬೈ ಗಡಿನಾಡ ಉತ್ಸವ”ದ ಲೋಗೋ ವನ್ನು ಅಬೂಹೈಲ್ ಸ್ಪೋರ್ಟ್ಸ್ ಬೈನಲ್ಲಿ ನಡೆದ ಸಮಾರಂಭದಲ್ಲಿ ದುಬೈನ ಹಿರಿಯ ಉದ್ಯಮಿ, ಸಮಾಜ ಸೇವಕ ಜೇಮ್ಸ್ ಮೆಂಡೋನ್ಸ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ನೋಡುತ್ತಾ ಬಂದಿದ್ದೆನೆ. ನಾಲ್ಕನೇ ವರ್ಷದ ಕಾರ್ಯಕ್ರಮದ ಕ್ಷಣಗಣನೆಯಲ್ಲಿ ನೀವೆಲ್ಲ ಇದ್ದಿರಿ. ಒಂದು ಒಳ್ಳೆಯ ಕಾರ್ಯಕ್ರಮವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.

ಅಕಾಡೆಮಿಯ ದುಬೈ ಘಟಕದ ಅಧ್ಯಕ್ಷ ಅಮರ ದೀಪ ಕಲ್ಲೂರಾಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಿವಶಂಕರ ನಕ್ರಾಜೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯಕಟ್ಟೆ, ದುಬೈ ಗಡಿನಾಡ ಉತ್ಸವದ ಸಂಚಾಲಕ ಝಡ್ ಎ ಕಯ್ಯಾರ್, ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಬಾಜೂರಿ, ಕೋಶಾಧಿಕಾರಿ ಅಶ್ರಫ್ ಪಿ ಪಿ, ಪಧಾಧಿಕಾರಿಗಳಾದ ಅಲಿ ಸಾಗ್, ಸುಗಂಧ ರಾಜ್ ಬೇಕಲ್, ಮಂಜುನಾಥ ಕಾಸರಗೋಡು, ಮನ್ಸೂರ್ ಪೆರ್ಲ, ವಿಜಯಕುಮಾರ ಶೆಟ್ಟಿ ಗಾಣದ ಮೂಲೆ, ಅನೀಶ್ ಅಡಪ್ಪ ಮಡಂದೂರು, ಶಾಕೀರ್ ಬಾಯಾರ್ ಮುಂತಾದವರು ಉಪಸ್ಥಿತರಿದ್ದರು.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories