ಯುಎಇದುಬೈ; ಅಕ್ಟೋಬರ್ 25ರಂದು '4ನೇ ದುಬೈ ಗಡಿನಾಡ ಉತ್ಸವ':...

ದುಬೈ; ಅಕ್ಟೋಬರ್ 25ರಂದು ‘4ನೇ ದುಬೈ ಗಡಿನಾಡ ಉತ್ಸವ’: ಲೋಗೋ ಬಿಡುಗಡೆ

ದುಬೈ: ಅಕ್ಟೋಬರ್ 25ರಂದು ದುಬೈನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕದ ವತಿಯಿಂದ ನಡೆಯುವ 4ನೇ “ದುಬೈ ಗಡಿನಾಡ ಉತ್ಸವ”ದ ಲೋಗೋ ವನ್ನು ಅಬೂಹೈಲ್ ಸ್ಪೋರ್ಟ್ಸ್ ಬೈನಲ್ಲಿ ನಡೆದ ಸಮಾರಂಭದಲ್ಲಿ ದುಬೈನ ಹಿರಿಯ ಉದ್ಯಮಿ, ಸಮಾಜ ಸೇವಕ ಜೇಮ್ಸ್ ಮೆಂಡೋನ್ಸ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದುಬೈ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ನೋಡುತ್ತಾ ಬಂದಿದ್ದೆನೆ. ನಾಲ್ಕನೇ ವರ್ಷದ ಕಾರ್ಯಕ್ರಮದ ಕ್ಷಣಗಣನೆಯಲ್ಲಿ ನೀವೆಲ್ಲ ಇದ್ದಿರಿ. ಒಂದು ಒಳ್ಳೆಯ ಕಾರ್ಯಕ್ರಮವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು.

ಅಕಾಡೆಮಿಯ ದುಬೈ ಘಟಕದ ಅಧ್ಯಕ್ಷ ಅಮರ ದೀಪ ಕಲ್ಲೂರಾಯ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಶಿವಶಂಕರ ನಕ್ರಾಜೆ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ ಸುಬ್ಬಯಕಟ್ಟೆ, ದುಬೈ ಗಡಿನಾಡ ಉತ್ಸವದ ಸಂಚಾಲಕ ಝಡ್ ಎ ಕಯ್ಯಾರ್, ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಬಾಜೂರಿ, ಕೋಶಾಧಿಕಾರಿ ಅಶ್ರಫ್ ಪಿ ಪಿ, ಪಧಾಧಿಕಾರಿಗಳಾದ ಅಲಿ ಸಾಗ್, ಸುಗಂಧ ರಾಜ್ ಬೇಕಲ್, ಮಂಜುನಾಥ ಕಾಸರಗೋಡು, ಮನ್ಸೂರ್ ಪೆರ್ಲ, ವಿಜಯಕುಮಾರ ಶೆಟ್ಟಿ ಗಾಣದ ಮೂಲೆ, ಅನೀಶ್ ಅಡಪ್ಪ ಮಡಂದೂರು, ಶಾಕೀರ್ ಬಾಯಾರ್ ಮುಂತಾದವರು ಉಪಸ್ಥಿತರಿದ್ದರು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories