Top Newsಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ...

ಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ ಗಾಯ; ವರದಿ

ಬರ್ಲಿನ್: ಜರ್ಮನಿಯ ಕ್ರಿಸ್‌ಮಸ್ ಮಾರುಕಟ್ಟೆಯ ಮೇಲೆ ನಡೆಸಲಾದ ದಾಳಿಯಲ್ಲಿ ಏಳು ಮಂದಿ ಭಾರತೀಯರು ಗಾಯಗೊಂಡಿದ್ದಾರೆ ಎಂದು ಮೂಲಗಳು ಇಂದು ತಿಳಿಸಿವೆ. ಅವರಲ್ಲಿ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಭಾರತೀಯ ರಾಯಭಾರ ಕಚೇರಿ ಎಲ್ಲಾ ಗಾಯಗೊಂಡ ಭಾರತೀಯರೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಜರ್ಮನಿಯ ಮ್ಯಾಗ್ಡೆಬರ್ಗ್‌ನಲ್ಲಿರುವ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ನಡೆದ ಭೀಕರ ದಾಳಿಯನ್ನು ಭಾರತ ಖಂಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.

“ಈ ದಾಳಿಯಲ್ಲಿ ಹಲವಾರು ಮಂದಿ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಪ್ರಾರ್ಥನೆಗಳು ಸಂತ್ರಸ್ತರೊಂದಿಗೆ ಇದೆ. ಗಾಯಗೊಂಡಿರುವ ಭಾರತೀಯರು ಮತ್ತು ಅವರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನಾವು ಮಾಡುತ್ತಿದ್ದೇವೆ” ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.

ಇಸ್ಲಾಂ ವಿರೋಧಿ ಅಭಿಪ್ರಾಯಗಳನ್ನು ಹೊಂದಿದ್ದ ವ್ಯಕ್ತಿಯೋರ್ವ ಈ ಕೃತ್ಯವನ್ನಸಗಿದ್ದು, ಈತ ಮುಸ್ಲಿಮರ ವಿರುದ್ಧ ಮತ್ತು ಜರ್ಮನಿಯ ವಲಸೆ ನೀತಿಯ ವಿರುದ್ಧ ಕೋಪಗೊಂಡು ಈ ಕೃತ್ಯವನ್ನೆಸಗಿದ್ದಾನೆ ಎಂದು ತಿಳಿದು ಬಂದಿದೆ.

Hot this week

ತವರು ಪ್ರೇಮ ಮೆರೆದ ಹುಬ್ಬಳ್ಳಿ ಮೂಲದ ಕನ್ನಡಿಗ; ಲಂಡನಿನಲ್ಲಿ ತನ್ನ ಹೊಸ ‘ಟೆಸ್ಲಾ’ ಕಾರಿಗೆ ಧಾರವಾಡ ರಿಜಿಸ್ಟ್ರೇಷನ್ ಸಂಖ್ಯೆ!

ಲಂಡನ್: ವಿದೇಶದಲ್ಲಿದ್ದುಕೊಂಡು ತಮ್ಮ ತವರು ನಗರದೊಂದಿಗಿನ ಭಾವನಾತ್ಮಕ ಸಂಪರ್ಕವನ್ನು ಜೀವಂತವಾಗಿಡಲು ಇಲ್ಲೊಬ್ಬ...

Veteran expat Abdulaziz Kushalnagar passes away in Riyadh

Riyadh: Abdulaziz Kushalnagar, a long-time Indian expatriate from Kushalnagar...

ನಾಳೆ ದುಬೈನಲ್ಲಿ ‘ಗ್ಲೋಬಲ್ ಮೀಡಿಯಾ ಐಕನ್ ಪ್ರಶಸ್ತಿ 2025’ ಪ್ರದಾನ; ಭಾಗವಹಿಸಲಿರುವ ಸಚಿವರು-ಸ್ಯಾಂಡಲ್‌ವುಡ್ ತಾರೆಯರ ದಂಡು

ದುಬೈ: ಕರ್ನಾಟಕ ಮೀಡಿಯಾ ಜರ್ನಲಿಸ್ಟ್‌ ಯೂನಿಯನ್‌(KMJU) ಆಶ್ರಯದಲ್ಲಿ 'ಗ್ಲೋಬಲ್ ಮೀಡಿಯಾ ಐಕನ್...

ಎ.12ರಂದು ದುಬೈನಲ್ಲಿ ‘ಆಕ್ಮೆ’ಯಿಂದ ‘ಸ್ಯಾಂಡಲ್‌ವುಡ್ ಟು ಬಾಲಿವುಡ್’ ವಿಶೇಷ ಸಂಗೀತ, ನೃತ್ಯ, ಹಾಸ್ಯಮಯ ಕಾರ್ಯಕ್ರಮ

ದುಬೈ: ಖ್ಯಾತ ಗಾಯಕ ಹಾಗು ಉದ್ಯಮಿ ಆಗಿರುವ ದುಬೈಯ ‘ಆಕ್ಮೆ’ ಬಿಲ್ಡಿಂಗ್...

ದುಬೈಯಲ್ಲಿ ಸಂಭ್ರಮ, ಸಡಗರದ ಶ್ರೀರಾಮನವಮಿ ಆಚರಣೆ

ದುಬೈ: ರಾಮನವಮಿ ಪ್ರಯುಕ್ತ ಶಂಕರ ಸೇವಾ ಸಮಿತಿಯವರು ದುಬೈಯ ಭಕ್ತಾಧಿಗಳನ್ನೆಲ್ಲ ಸೇರಿಸಿಕೊಂಡು...

Related Articles

Popular Categories