Top Newsಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ...

ಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ ಗಾಯ; ವರದಿ

ಬರ್ಲಿನ್: ಜರ್ಮನಿಯ ಕ್ರಿಸ್‌ಮಸ್ ಮಾರುಕಟ್ಟೆಯ ಮೇಲೆ ನಡೆಸಲಾದ ದಾಳಿಯಲ್ಲಿ ಏಳು ಮಂದಿ ಭಾರತೀಯರು ಗಾಯಗೊಂಡಿದ್ದಾರೆ ಎಂದು ಮೂಲಗಳು ಇಂದು ತಿಳಿಸಿವೆ. ಅವರಲ್ಲಿ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಭಾರತೀಯ ರಾಯಭಾರ ಕಚೇರಿ ಎಲ್ಲಾ ಗಾಯಗೊಂಡ ಭಾರತೀಯರೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಜರ್ಮನಿಯ ಮ್ಯಾಗ್ಡೆಬರ್ಗ್‌ನಲ್ಲಿರುವ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ನಡೆದ ಭೀಕರ ದಾಳಿಯನ್ನು ಭಾರತ ಖಂಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.

“ಈ ದಾಳಿಯಲ್ಲಿ ಹಲವಾರು ಮಂದಿ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಪ್ರಾರ್ಥನೆಗಳು ಸಂತ್ರಸ್ತರೊಂದಿಗೆ ಇದೆ. ಗಾಯಗೊಂಡಿರುವ ಭಾರತೀಯರು ಮತ್ತು ಅವರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನಾವು ಮಾಡುತ್ತಿದ್ದೇವೆ” ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.

ಇಸ್ಲಾಂ ವಿರೋಧಿ ಅಭಿಪ್ರಾಯಗಳನ್ನು ಹೊಂದಿದ್ದ ವ್ಯಕ್ತಿಯೋರ್ವ ಈ ಕೃತ್ಯವನ್ನಸಗಿದ್ದು, ಈತ ಮುಸ್ಲಿಮರ ವಿರುದ್ಧ ಮತ್ತು ಜರ್ಮನಿಯ ವಲಸೆ ನೀತಿಯ ವಿರುದ್ಧ ಕೋಪಗೊಂಡು ಈ ಕೃತ್ಯವನ್ನೆಸಗಿದ್ದಾನೆ ಎಂದು ತಿಳಿದು ಬಂದಿದೆ.

Hot this week

ದುಬೈ; ನವೆಂಬರ್ 1ರಂದು 71ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾದ ಕರ್ನಾಟಕ ಸಂಘ ದುಬೈ

ದುಬೈ: ಯುಎಇಯಲ್ಲಿರುವ ಕನ್ನಡಿಗರ ಅತಿದೊಡ್ಡ ಮತ್ತು ಅತ್ಯಂತ ಹಳೆಯ ಸಂಘಟನೆಯಾದ ಕರ್ನಾಟಕ...

ಕನ್ನಡ ಕಲಿಕೆಯ ಜೊತೆ ಖತರ್‌ನ ಸ್ಥಳೀಯ ಸಮುದಾಯದಲ್ಲಿ ಭಾರತೀಯ ಸಂಸ್ಕೃತಿ ಪ್ರಚಾರಕ್ಕೆ ಆದ್ಯತೆ ನೀಡಿ: ಭಾರತೀಯ ರಾಯಭಾರಿ ವಿಪುಲ್ ಮನವಿ

ದೋಹಾ: ಖತರ್‌ನ ಭಾರತೀಯ ಸಾಂಸ್ಕೃತಿಕ ಕೇಂದ್ರದ (ಐಸಿಸಿ) ಅಂಗಸಂಸ್ಥೆಯಾದ ‘ಕರ್ನಾಟಕ ಸಂಘ...

ಬಹರೈನ್‌; ‘ಕೆಸಿಎಫ್’ನಿಂದ ಈದ್ ಮಿಲಾದ್ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಮನಾಮ: ಕರ್ನಾಟಕ ಕಲ್ಬರಲ್ ಫೌಂಡೇಶನ್ (ಕೆಸಿಎಫ್) ಬಹರೈನ್‌ ವತಿಯಿಂದ ಪ್ರವಾದಿ ಮುಹಮ್ಮದ್‌ರವರ...

ಅಮೇರಿಕ; ಭಕ್ತಿ, ಬಸವತತ್ವ, ನಾಟಕ-ನೃತ್ಯ ವೈಭವದಿಂದ ಕಂಗೊಳಿಸಿದ VSNA ಮಹಾಸಮ್ಮೇಳನದ ಎರಡನೇ ದಿನ

ವರದಿ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಸ್ಯಾನ್‌ಫೋರ್ಡ್ (ಉತ್ತರ ಕೆರೊಲಿನಾ: 48ನೇ ವೀರಶೈವ ಸೊಸೈಟಿ...

ಕನ್ನಡ ಸಂಘ ಬಹರೈನ್‌ನ ‘ಯಕ್ಷ ವೈಭವ 2026’ ಮುಹೂರ್ತ ಪೂಜೆ ಸಂಪನ್ನ

ಬಹರೈನ್‌: ಕನ್ನಡ ಸಂಘ ಬಹರೈನ್ ಅರ್ಪಿಸುವ ‘ಯಕ್ಷ ವೈಭವ 2026’ ರ...

Related Articles

Popular Categories