Top Newsಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ...

ಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ ಗಾಯ; ವರದಿ

ಬರ್ಲಿನ್: ಜರ್ಮನಿಯ ಕ್ರಿಸ್‌ಮಸ್ ಮಾರುಕಟ್ಟೆಯ ಮೇಲೆ ನಡೆಸಲಾದ ದಾಳಿಯಲ್ಲಿ ಏಳು ಮಂದಿ ಭಾರತೀಯರು ಗಾಯಗೊಂಡಿದ್ದಾರೆ ಎಂದು ಮೂಲಗಳು ಇಂದು ತಿಳಿಸಿವೆ. ಅವರಲ್ಲಿ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಭಾರತೀಯ ರಾಯಭಾರ ಕಚೇರಿ ಎಲ್ಲಾ ಗಾಯಗೊಂಡ ಭಾರತೀಯರೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಜರ್ಮನಿಯ ಮ್ಯಾಗ್ಡೆಬರ್ಗ್‌ನಲ್ಲಿರುವ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ನಡೆದ ಭೀಕರ ದಾಳಿಯನ್ನು ಭಾರತ ಖಂಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.

“ಈ ದಾಳಿಯಲ್ಲಿ ಹಲವಾರು ಮಂದಿ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಪ್ರಾರ್ಥನೆಗಳು ಸಂತ್ರಸ್ತರೊಂದಿಗೆ ಇದೆ. ಗಾಯಗೊಂಡಿರುವ ಭಾರತೀಯರು ಮತ್ತು ಅವರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನಾವು ಮಾಡುತ್ತಿದ್ದೇವೆ” ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.

ಇಸ್ಲಾಂ ವಿರೋಧಿ ಅಭಿಪ್ರಾಯಗಳನ್ನು ಹೊಂದಿದ್ದ ವ್ಯಕ್ತಿಯೋರ್ವ ಈ ಕೃತ್ಯವನ್ನಸಗಿದ್ದು, ಈತ ಮುಸ್ಲಿಮರ ವಿರುದ್ಧ ಮತ್ತು ಜರ್ಮನಿಯ ವಲಸೆ ನೀತಿಯ ವಿರುದ್ಧ ಕೋಪಗೊಂಡು ಈ ಕೃತ್ಯವನ್ನೆಸಗಿದ್ದಾನೆ ಎಂದು ತಿಳಿದು ಬಂದಿದೆ.

Hot this week

ದುಬೈ; ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ ನಲ್ಲಿ ಓಣಂ ಹಬ್ಬ ಆಚರಣೆ

ದುಬೈ : ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಫಾರ್ಚೂನ್ ಗ್ರೂಪ್...

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

Related Articles

Popular Categories