ಯುಎಸ್‌ಎಬೆಂಗಳೂರಿನಲ್ಲಿ ಶೀಘ್ರದಲ್ಲೇ ಅಮೆರಿಕದ ರಾಯಭಾರಿ ಕಚೇರಿ ಆರಂಭ: ಎರಿಕ್...

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಅಮೆರಿಕದ ರಾಯಭಾರಿ ಕಚೇರಿ ಆರಂಭ: ಎರಿಕ್ ಗಾರ್ಸೆಟ್ಟಿ

ಬೆಂಗಳೂರು: “ಬೆಂಗಳೂರಿನಲ್ಲಿ ಹಲವು ದೇಶಗಳ ರಾಯಭಾರ ಕಚೇರಿಯಿದ್ದು, ಆದರೆ ಅಮೆರಿಕದ ರಾಯಭಾರ ಕಚೇರಿಯನ್ನು ಇನ್ನೂ ತೆರೆಯಲಾಗಿಲ್ಲ ಎನ್ನುವುದು ನಾವೆಲ್ಲರೂ ಗಮನಿಸಬೇಕಾದ ಪ್ರಮುಖ ವಿಚಾರ” ಎಂದು ಅಮೇರಿಕದ ಭಾರತೀಯ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಹೇಳಿದ್ದಾರೆ. ಅವರು ಗುರುವಾರ ಯುಎಸ್-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ (ಯುಎಸ್‌ಐಬಿಸಿ) ಆಯೋಜಿಸಿದ್ದ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡುತ್ತಿದ್ದರು.

ಈ ಹಿಂದೆ ಬೆಂಗಳೂರು ಮತ್ತು ಗುಜರಾತ್‌ ನ ಅಹ್ಮದಾಬಾದ್‌ ನಲ್ಲಿ ರಾಯಭಾರ ಕಚೇರಿಯನ್ನು ತೆರೆಯುವ ಕುರಿತು ಘೋಷಣೆ ಮಾಡಲಾಗಿತ್ತು. ಇದರ ಪ್ರಗತಿಯ ಕುರಿತು ಆಶಾವಾದ ವ್ಯಕ್ತಪಡಿಸಿದ ಅವರು, “ಬೆಂಗಳೂರಿನಲ್ಲಿ ಕಾನ್ಸುಲೇಟ್ ತೆರೆಯಲು ನಾವು ಬದ್ಧರಾಗಿದ್ದೇವೆ ಮತ್ತು ಶೀಘ್ರದಲ್ಲೇ ಘೋಷಣೆ ಮಾಡುವ ಭರವಸೆ ಇದೆ” ಎಂದು ಹೇಳಿದರು.

ಯುಎಸ್ ಈಗಾಗಲೇ ಬೆಂಗಳೂರಿನಲ್ಲಿ ವಿದೇಶಿ ವಾಣಿಜ್ಯ ಸೇವಾ ಕಚೇರಿಯನ್ನು ಹೊಂದಿದ್ದು, ಎರಡು ರಾಷ್ಟ್ರಗಳ ನಡುವೆ ಬೆಳೆಯುತ್ತಿರುವ ಬಾಂಧವ್ಯವನ್ನು ಅದು ಬಲಪಡಿಸುತ್ತದೆ ಎಂದು ಹೇಳಿದರು. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಕ್ಕೆ ಭೇಟಿ ನೀಡಿದ್ದ ವೇಳೆ ಭಾರತದಲ್ಲಿ ಎರಡು ಹೊಸ ರಾಯಭಾರಿ ಕಚೇರಿಗಳನ್ನು ತೆರೆಯುವುದಾಗಿ ಘೋಷಣೆ ಮಾಡಿದ್ದರು.

ಈ ವಿಚಾರದ ಕುರಿತು ಮಾತನಾಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಬೆಂಗಳೂರಿನ ಜನರಿಗೆ ಅಮೆರಿಕಾ ಸಂಬಂಧಿತ ಕೆಲಸಕ್ಕಾಗಿ ಅಥವಾ ವಿಸಾ ಪಡೆಯುವ ಸಲುವಾಗಿ ಚೆನ್ನೈ, ಹೈದರಾಬಾದ್‌ ಅಥವಾ ದಿಲ್ಲಿಗೆ ಹೋಗಬೇಕಿತ್ತು. ಕೇವಲ ಈ ಪ್ರಯಾಣಕ್ಕಾಗಿಯೇ 30,000ರೂ.ಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗ ಶ್ವೇತಭವನದ ಘೋಷಣೆಯ ಬಗ್ಗೆ ನಮಗೆ ಸಂತೋಷವಾಗಿದೆ ಮತ್ತು ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಹೇಳಿದ್ದಾರೆ.

Hot this week

ದುಬೈನಲ್ಲಿ ‘ಗಂಧರ್ವ ಗಮಕ ಶಾಲೆ’ ಉದ್ಘಾಟನೆ

ದುಬೈ: ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ಅವರ ಶಿಷ್ಯ ಪರಂಪರೆಯನ್ನು ಮುಂದುವರಿಸುವ ಮಹತ್ವದ...

ದುಬೈಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ

ದುಬೈ: ಅರಬ್ ಸಂಯುಕ್ತ ಸಂಸ್ಥಾನ ವಾಣಿಜ್ಯ ನಗರಿ ದುಬೈಯಲ್ಲಿ ಸಾಮೂಹಿಕ ಶ್ರೀ...

ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ ‘ಸ್ನೇಹ ಸಂಗಮ’ ಕಾರ್ಯಕ್ರಮ

ಸಲಾಲ(ಒಮಾನ್): ಇಲ್ಲಿನ ಅನಿವಾಸಿ ಕನ್ನಡಿಗರ ಅನ್ನೂರ್ ಎಜುಕೇಶನಲ್ ಸೆಂಟರ್ ವತಿಯಿಂದ 'ಸ್ನೇಹ...

ವಿಶ್ವದಲ್ಲೇ ಮೊದಲ ಬಾರಿ ಜರ್ಮನ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಸಿದ್ಧತೆ

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಕರಾವಳಿ ಕರ್ನಾಟಕದ ಜನಪ್ರಿಯ ಕಲೆಯಾಗಿರುವ ಯಕ್ಷಗಾನವು...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ...

Related Articles

Popular Categories