ಯುಎಸ್‌ಎಬೆಂಗಳೂರಿನಲ್ಲಿ ಶೀಘ್ರದಲ್ಲೇ ಅಮೆರಿಕದ ರಾಯಭಾರಿ ಕಚೇರಿ ಆರಂಭ: ಎರಿಕ್...

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಅಮೆರಿಕದ ರಾಯಭಾರಿ ಕಚೇರಿ ಆರಂಭ: ಎರಿಕ್ ಗಾರ್ಸೆಟ್ಟಿ

ಬೆಂಗಳೂರು: “ಬೆಂಗಳೂರಿನಲ್ಲಿ ಹಲವು ದೇಶಗಳ ರಾಯಭಾರ ಕಚೇರಿಯಿದ್ದು, ಆದರೆ ಅಮೆರಿಕದ ರಾಯಭಾರ ಕಚೇರಿಯನ್ನು ಇನ್ನೂ ತೆರೆಯಲಾಗಿಲ್ಲ ಎನ್ನುವುದು ನಾವೆಲ್ಲರೂ ಗಮನಿಸಬೇಕಾದ ಪ್ರಮುಖ ವಿಚಾರ” ಎಂದು ಅಮೇರಿಕದ ಭಾರತೀಯ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಹೇಳಿದ್ದಾರೆ. ಅವರು ಗುರುವಾರ ಯುಎಸ್-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ (ಯುಎಸ್‌ಐಬಿಸಿ) ಆಯೋಜಿಸಿದ್ದ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡುತ್ತಿದ್ದರು.

ಈ ಹಿಂದೆ ಬೆಂಗಳೂರು ಮತ್ತು ಗುಜರಾತ್‌ ನ ಅಹ್ಮದಾಬಾದ್‌ ನಲ್ಲಿ ರಾಯಭಾರ ಕಚೇರಿಯನ್ನು ತೆರೆಯುವ ಕುರಿತು ಘೋಷಣೆ ಮಾಡಲಾಗಿತ್ತು. ಇದರ ಪ್ರಗತಿಯ ಕುರಿತು ಆಶಾವಾದ ವ್ಯಕ್ತಪಡಿಸಿದ ಅವರು, “ಬೆಂಗಳೂರಿನಲ್ಲಿ ಕಾನ್ಸುಲೇಟ್ ತೆರೆಯಲು ನಾವು ಬದ್ಧರಾಗಿದ್ದೇವೆ ಮತ್ತು ಶೀಘ್ರದಲ್ಲೇ ಘೋಷಣೆ ಮಾಡುವ ಭರವಸೆ ಇದೆ” ಎಂದು ಹೇಳಿದರು.

ಯುಎಸ್ ಈಗಾಗಲೇ ಬೆಂಗಳೂರಿನಲ್ಲಿ ವಿದೇಶಿ ವಾಣಿಜ್ಯ ಸೇವಾ ಕಚೇರಿಯನ್ನು ಹೊಂದಿದ್ದು, ಎರಡು ರಾಷ್ಟ್ರಗಳ ನಡುವೆ ಬೆಳೆಯುತ್ತಿರುವ ಬಾಂಧವ್ಯವನ್ನು ಅದು ಬಲಪಡಿಸುತ್ತದೆ ಎಂದು ಹೇಳಿದರು. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಕ್ಕೆ ಭೇಟಿ ನೀಡಿದ್ದ ವೇಳೆ ಭಾರತದಲ್ಲಿ ಎರಡು ಹೊಸ ರಾಯಭಾರಿ ಕಚೇರಿಗಳನ್ನು ತೆರೆಯುವುದಾಗಿ ಘೋಷಣೆ ಮಾಡಿದ್ದರು.

ಈ ವಿಚಾರದ ಕುರಿತು ಮಾತನಾಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಬೆಂಗಳೂರಿನ ಜನರಿಗೆ ಅಮೆರಿಕಾ ಸಂಬಂಧಿತ ಕೆಲಸಕ್ಕಾಗಿ ಅಥವಾ ವಿಸಾ ಪಡೆಯುವ ಸಲುವಾಗಿ ಚೆನ್ನೈ, ಹೈದರಾಬಾದ್‌ ಅಥವಾ ದಿಲ್ಲಿಗೆ ಹೋಗಬೇಕಿತ್ತು. ಕೇವಲ ಈ ಪ್ರಯಾಣಕ್ಕಾಗಿಯೇ 30,000ರೂ.ಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗ ಶ್ವೇತಭವನದ ಘೋಷಣೆಯ ಬಗ್ಗೆ ನಮಗೆ ಸಂತೋಷವಾಗಿದೆ ಮತ್ತು ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಹೇಳಿದ್ದಾರೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories