ಯುಎಸ್‌ಎಬೆಂಗಳೂರಿನಲ್ಲಿ ಶೀಘ್ರದಲ್ಲೇ ಅಮೆರಿಕದ ರಾಯಭಾರಿ ಕಚೇರಿ ಆರಂಭ: ಎರಿಕ್...

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಅಮೆರಿಕದ ರಾಯಭಾರಿ ಕಚೇರಿ ಆರಂಭ: ಎರಿಕ್ ಗಾರ್ಸೆಟ್ಟಿ

ಬೆಂಗಳೂರು: “ಬೆಂಗಳೂರಿನಲ್ಲಿ ಹಲವು ದೇಶಗಳ ರಾಯಭಾರ ಕಚೇರಿಯಿದ್ದು, ಆದರೆ ಅಮೆರಿಕದ ರಾಯಭಾರ ಕಚೇರಿಯನ್ನು ಇನ್ನೂ ತೆರೆಯಲಾಗಿಲ್ಲ ಎನ್ನುವುದು ನಾವೆಲ್ಲರೂ ಗಮನಿಸಬೇಕಾದ ಪ್ರಮುಖ ವಿಚಾರ” ಎಂದು ಅಮೇರಿಕದ ಭಾರತೀಯ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಹೇಳಿದ್ದಾರೆ. ಅವರು ಗುರುವಾರ ಯುಎಸ್-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ (ಯುಎಸ್‌ಐಬಿಸಿ) ಆಯೋಜಿಸಿದ್ದ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡುತ್ತಿದ್ದರು.

ಈ ಹಿಂದೆ ಬೆಂಗಳೂರು ಮತ್ತು ಗುಜರಾತ್‌ ನ ಅಹ್ಮದಾಬಾದ್‌ ನಲ್ಲಿ ರಾಯಭಾರ ಕಚೇರಿಯನ್ನು ತೆರೆಯುವ ಕುರಿತು ಘೋಷಣೆ ಮಾಡಲಾಗಿತ್ತು. ಇದರ ಪ್ರಗತಿಯ ಕುರಿತು ಆಶಾವಾದ ವ್ಯಕ್ತಪಡಿಸಿದ ಅವರು, “ಬೆಂಗಳೂರಿನಲ್ಲಿ ಕಾನ್ಸುಲೇಟ್ ತೆರೆಯಲು ನಾವು ಬದ್ಧರಾಗಿದ್ದೇವೆ ಮತ್ತು ಶೀಘ್ರದಲ್ಲೇ ಘೋಷಣೆ ಮಾಡುವ ಭರವಸೆ ಇದೆ” ಎಂದು ಹೇಳಿದರು.

ಯುಎಸ್ ಈಗಾಗಲೇ ಬೆಂಗಳೂರಿನಲ್ಲಿ ವಿದೇಶಿ ವಾಣಿಜ್ಯ ಸೇವಾ ಕಚೇರಿಯನ್ನು ಹೊಂದಿದ್ದು, ಎರಡು ರಾಷ್ಟ್ರಗಳ ನಡುವೆ ಬೆಳೆಯುತ್ತಿರುವ ಬಾಂಧವ್ಯವನ್ನು ಅದು ಬಲಪಡಿಸುತ್ತದೆ ಎಂದು ಹೇಳಿದರು. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಕ್ಕೆ ಭೇಟಿ ನೀಡಿದ್ದ ವೇಳೆ ಭಾರತದಲ್ಲಿ ಎರಡು ಹೊಸ ರಾಯಭಾರಿ ಕಚೇರಿಗಳನ್ನು ತೆರೆಯುವುದಾಗಿ ಘೋಷಣೆ ಮಾಡಿದ್ದರು.

ಈ ವಿಚಾರದ ಕುರಿತು ಮಾತನಾಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಬೆಂಗಳೂರಿನ ಜನರಿಗೆ ಅಮೆರಿಕಾ ಸಂಬಂಧಿತ ಕೆಲಸಕ್ಕಾಗಿ ಅಥವಾ ವಿಸಾ ಪಡೆಯುವ ಸಲುವಾಗಿ ಚೆನ್ನೈ, ಹೈದರಾಬಾದ್‌ ಅಥವಾ ದಿಲ್ಲಿಗೆ ಹೋಗಬೇಕಿತ್ತು. ಕೇವಲ ಈ ಪ್ರಯಾಣಕ್ಕಾಗಿಯೇ 30,000ರೂ.ಯಷ್ಟು ಹಣ ಖರ್ಚಾಗುತ್ತಿತ್ತು. ಇದೀಗ ಶ್ವೇತಭವನದ ಘೋಷಣೆಯ ಬಗ್ಗೆ ನಮಗೆ ಸಂತೋಷವಾಗಿದೆ ಮತ್ತು ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಹೇಳಿದ್ದಾರೆ.

Hot this week

ಅಜ್ಮಾನ್; ತುಂಬೆ ಸಮೂಹ ಸಂಸ್ಥೆಯಿಂದ BCF ಅಧ್ಯಕ್ಷ ಡಾ.ಬಿ.ಕೆ.ಯೂಸುಫ್​ಗೆ ʼLIFE TIME ACHIEVEMENT AWARDʼ

ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ...

ದುಬೈ; ‘ಬದ್ರಿಯಾ ಪ್ರೀಮಿಯರ್ ಲೀಗ್(BPL)-ಸೀಸನ್ 8’; ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಅಲ್ ದನಾ XI ತಂಡ; ರಾಯಲ್ ಥಂಡರ್ ಕುಡ್ಲ ರನ್ನರ್ ಅಪ್

ದುಬೈ: ಅನಿವಾಸಿ ಕನ್ನಡಿಗರ ಸಾಮಾಜಿಕ ಸಂಘಟನೆಯಾದ ‘ಬದ್ರಿಯಾ ಫ್ರೆಂಡ್ಸ್ ಯುಎಇ’ ಆಶ್ರಯದಲ್ಲಿ...

ಶೀಘ್ರವೇ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ಪ್ರತ್ಯೇಕ ಸಚಿವಾಲಯವನ್ನು...

ಡಿ.12ರಂದು ಬಹರೈನ್ ಕನ್ನಡ ಸಂಘದಿಂದ ‘ಕನ್ನಡ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮ; ಮುತ್ತುಗಳ ದ್ವೀಪದಲ್ಲಿ ಹಾಡು, ಹಾಸ್ಯ, ನೃತ್ಯಗಳ ಮಹಾ ಸಂಗಮ

ಬಹರೈನ್: ಇಲ್ಲಿನ ರಾಜ್ಯಪ್ರಶಸ್ತಿ ಪುರಸ್ಕೃತ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮವಾದ "ಕನ್ನಡ...

Related Articles

Popular Categories