Lead Newsಗಾಝಾ ಮಕ್ಕಳ ನರಮೇಧವನ್ನು ಕಟುವಾಗಿ ಖಂಡಿಸಿದ ಪೋಪ್‌ ಫ್ರಾನ್ಸಿಸ್‌

ಗಾಝಾ ಮಕ್ಕಳ ನರಮೇಧವನ್ನು ಕಟುವಾಗಿ ಖಂಡಿಸಿದ ಪೋಪ್‌ ಫ್ರಾನ್ಸಿಸ್‌

ವ್ಯಾಟಿಕನ್‌ ಸಿಟಿ: ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಿಂದಾಗಿ ಒಂದೇ ಕುಟುಂಬದ ಏಳು ಮಕ್ಕಳು ಮರಣ ಹೊಂದಿದ್ದಾರೆ ಎಂದು ಗಾಝಾದ ರಕ್ಷಣಾ ಸಂಸ್ಥೆಯೊಂದು ಹೇಳಿಕೆ ನೀಡಿದ ಒಂದು ದಿನದ ಬಳಿಕ ಈ ದಾಳಿಯನ್ನು ಕ್ರೈಸ್ತರ ಪರಮೋಚ್ಛ ನಾಯಕ ಪೋಪ್‌ ಫ್ರಾನ್ಸಿಸ್‌ ಕಟುವಾಗಿ ಖಂಡಿಸಿದ್ದಾರೆ. ಇದೊಂದು ಕ್ರೌರ್ಯವಾಗಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಸ್ರೇಲಿ ವೈಮಾನಿಕ ದಾಳಿಯು ಶುಕ್ರವಾರ ಗಾಝಾದ ಉತ್ತರ ಭಾಗದಲ್ಲಿ ಏಳು ಮಕ್ಕಳು ಸೇರಿದಂತೆ ಒಂದು ಕುಟುಂಬದ 10 ಸದಸ್ಯರನ್ನು ಕೊಂದಿದೆ ಎಂದು ಗಾಝಾ ನಾಗರಿಕ ರಕ್ಷಣಾ ಸಂಸ್ಥೆಯು ವರದಿಯಲ್ಲಿ ತಿಳಿಸಿದೆ.

“ನಿನ್ನೆ ಅವರು ಈ ಹಿಂದೆ ವಾಗ್ದಾನ ಮಾಡಿದಂತೆ ಜನರನ್ನು ಗಾಝಾಕ್ಕೆ ಅನುಮತಿಸಲಿಲ್ಲ ಮಾತ್ರವಲ್ಲದೇ ಅವರು ಮಕ್ಕಳ ಮೇಲೆ ಬಾಂಬ್‌ ದಾಳಿ ನಡೆಸಿದ್ದಾರೆ. ಇದು ಯುದ್ಧವಲ್ಲ ಕ್ರೌರ್ಯ” ಎಂದು ಹೇಳಿದ ಪೋಪ್‌ ಫ್ರಾನ್ಸಿಸ್‌, “ಇದು ನನ್ನ ಹೃದಯವನ್ನು ಚುಚ್ಚುತ್ತದೆ, ಆದ್ದರಿಂದ ಈ ಮಾತನ್ನು ನಾನು ಹೇಳುತ್ತಿದ್ದೇನೆ” ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಇಸ್ರೇಲ್‌ ಸೈನ್ಯ ಮತ್ತು ಫ್ಯಾಲೆಸ್ತೀನ್‌ ನ ಹಮಾಸ್‌ ನಡುವೆ ಕದನ ವಿರಾಮ ತರುವ ಕುರಿತಾದಂತೆ ಹಲವು ಅಂತಾರಾಷ್ಟ್ರೀಯ ಮಧ್ಯವರ್ತಿಗಳು ಮಾತುಕತೆಗಳನ್ನು ನಡೆಸುತ್ತಿರುವ ಮಧ್ಯೆಯೇ ಈ ಬಾಂಬ್‌ ದಾಳಿ ನಡೆದಿದೆ.

Hot this week

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

ಭಾರತದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಕರ್ನಾಟಕ ಸಂಘ ಖತರ್‌ನ ಅದ್ದೂರಿ ಭಾಗವಹಿಸುವಿಕೆ

ದೋಹಾ(ಖತರ್): ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾರತೀಯ ರಾಯಭಾರ ಕಚೇರಿ ದೋಹಾ...

ಬಹರೈನ್; ಆಗಸ್ಟ್ 21ರಂದು ‘ಕೆಸಿಎಫ್’ನಿಂದ ಗ್ರ್ಯಾಂಡ್ ಮೀಲಾದ್ ಕಾನ್ಫರೆನ್ಸ್

ಮನಾಮ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ...

Related Articles

Popular Categories