ಇತರೆಆರೋಪಗಳನ್ನು ಸಾಬೀತುಪಡಿಸುವ ಪುರಾವೆಗಳನ್ನು ಕೆನಡಾ ನೀಡಿಲ್ಲ: ಭಾರತ ಸರಕಾರ

ಆರೋಪಗಳನ್ನು ಸಾಬೀತುಪಡಿಸುವ ಪುರಾವೆಗಳನ್ನು ಕೆನಡಾ ನೀಡಿಲ್ಲ: ಭಾರತ ಸರಕಾರ

ಭಾರತೀಯ ಪ್ರಜೆಗಳು ಕೆನಡಾದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎನ್ನುವ ಕೆನಡಾದ ಗಂಭೀರ ಆರೋಪಗಳನ್ನು ಬೆಂಬಲಿಸುವ ಯಾವುದೇ ಪುರಾವೆಗಳನ್ನು ಆ ದೇಶ ನೀಡಿಲ್ಲ ಎಂದು ಕೇಂದ್ರ ಸರಕಾರ ಸಂಸತ್ತಿಗೆ ಮಾಹಿತಿ ನೀಡಿದೆ.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಲೋಕಸಭೆಯಲ್ಲಿ ಮಾತನಾಡಿ, ಅಮೆರಿಕ ಮತ್ತು ಕೆನಡಾದಲ್ಲಿ ಭಾರತೀಯರು ಭಾಗಿಯಾಗಿದ್ದಾರೆ ಎನ್ನಲಾದ ಅಪರಾಧ ಕೃತ್ಯಗಳ ಚಟುವಟಿಕೆಗಳನ್ನು ಗಮನಿಸಿದ್ದೀರಿ ಎಂದು ಪ್ರಶ್ನಿಸಿದ್ದು, ಈ ಪ್ರಶ್ನೆಗೆ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಉತ್ತರಿಸಿದರು.

ಅಮೆರಿಕಾ ಮತ್ತು ಕೆನಡಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದಾರೆ ಎನ್ನಲಾದ ಅಪರಾಧ ಕೃತ್ಯ ಬೆಳವಣಿಗೆಗಳ ಬಗ್ಗೆ ತಿಳಿದಿದೆ.

“ಅಮೆರಿಕದ ಜೊತೆಗಿನ ಭದ್ರತಾ ಸಹಕಾರದ ಭಾಗವಾಗಿ, ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳ ಮೇಲೆ ಪ್ರಭಾವ ಬೀರುವ ಸಂಘಟಿತ ಅಪರಾಧಿಗಳು, ಭಯೋತ್ಪಾದಕರು ಮತ್ತು ಇತರರ ನಡುವಿನ ಸಂಬಂಧಕ್ಕೆ ಸಂಬಂಧಿಸಿದಂತೆ ಅಮೆರಿಕ ನೀಡಿರುವ ಮಾಹಿತಿಗಳ ಕುರಿತು ಉನ್ನತ ಮಟ್ಟದ ಪರಿಶೀಲನೆ ನಡೆಯುತ್ತಿದೆ. ಈ ಉದ್ದೇಶಕ್ಕಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದವರು ಹೇಳಿದರು.

“ಇನ್ನು ಕೆನಡಾಗೆ ಸಂಬಂಧಿಸಿ ಹೇಳುವುದಾದರೆ ಮಾಡಿರುವಂತಹ ಗಂಭೀರ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳನ್ನು ನೀಡಿಲ್ಲ” ಎಂದು ಸಿಂಗ್‌ ಹೇಳಿದರು. 

ಈ ವಿಷಯದ ಬಗ್ಗೆ ಕೆನಡಾದ ಸಾರ್ವಜನಿಕ ಮನೋಭಾವ ಭಾರತ-ವಿರೋಧಿ ಪ್ರತ್ಯೇಕತಾವಾದಿ ಅಜೆಂಡಾದ ಪರ ಇದೆ. ಅಂತಹ ಮನೋಭಾವ ಮುಂದುವರಿಸುವುದು ಯಾವುದೇ ಸ್ಥಿರ ದ್ವಿಪಕ್ಷೀಯ ಸಂಬಂಧಕ್ಕೆ ಹಾನಿಕಾರಕವಾಗಿದೆ. ಕೆನಡಾದ ಅಧಿಕಾರಿಗಳು ತಮ್ಮ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಾರತ ವಿರೋಧಿ ಅಂಶಗಳ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು.

Hot this week

ಅಬುಧಾಬಿಗೆ ಸಚಿವ ಡಾ.ಜೈಶಂಕರ್ ಭೇಟಿ; ಕನ್ನಡಿಗರ ಕೂಟ ದುಬೈ-ಅಬುಧಾಬಿ ಕರ್ನಾಟಕ ಸಂಘ ಪ್ರತಿನಿಧಿತ್ವ

ಅಬುಧಾಬಿ: ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು...

ದುಬೈ; ‘ಬ್ಯಾರೀಸ್ ಪ್ರೀಮಿಯರ್ ಲೀಗ್-2026’ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕ್ರೌನ್ ಹೊನ್ನಾವರ; ನಫೀಸ್ ಗ್ರೂಪ್ ರನ್ನರ್ ಅಪ್

ದುಬೈ: ಶಾರ್ಜಾದ ಬಿಜೋಯ್ಸ್ ಕ್ರಿಕೆಟ್ ಕ್ರೀಡಾಗಂಣದಲ್ಲಿ ರವಿವಾರ ನಡೆದ 'ಬ್ಯಾರೀಸ್ ಪ್ರೀಮಿಯರ್...

ಕರ್ನಾಟಕ ಸಂಘ ಶಾರ್ಜಾದ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ ಆಯ್ಕೆ

ದುಬೈ: ಕರ್ನಾಟಕ ಸಂಘ ಶಾರ್ಜಾ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ್ ಶೆಟ್ಟಿ...

ರಮಝಾನ್-ಈದುಲ್ ಫಿತ್ರ್ ಅಂಗವಾಗಿ ಕನ್ನಡ ಸಂಘ ಬಹರೈನ್ ವತಿಯಿಂದ ಆಹಾರ ವಸ್ತುಗಳ ಕಿಟ್ ವಿತರಣೆ

ಬಹರೈನ್: ಪವಿತ್ರ ರಮಝಾನ್ ಮತ್ತು ಈದುಲ್ ಫಿತ್ರ್ ಹಬ್ಬದ ಅಂಗವಾಗಿ ಪ್ರಸ್ತುತ...

Related Articles

Popular Categories