Top Newsಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ...

ಜರ್ಮನಿ: ಕ್ರಿಸ್‌ಮಸ್‌ ಮಾರ್ಕೆಟ್‌ ದಾಳಿಯಲ್ಲಿ ಏಳು ಮಂದಿ ಭಾರತೀಯರಿಗೆ ಗಾಯ; ವರದಿ

ಬರ್ಲಿನ್: ಜರ್ಮನಿಯ ಕ್ರಿಸ್‌ಮಸ್ ಮಾರುಕಟ್ಟೆಯ ಮೇಲೆ ನಡೆಸಲಾದ ದಾಳಿಯಲ್ಲಿ ಏಳು ಮಂದಿ ಭಾರತೀಯರು ಗಾಯಗೊಂಡಿದ್ದಾರೆ ಎಂದು ಮೂಲಗಳು ಇಂದು ತಿಳಿಸಿವೆ. ಅವರಲ್ಲಿ ಮೂವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಭಾರತೀಯ ರಾಯಭಾರ ಕಚೇರಿ ಎಲ್ಲಾ ಗಾಯಗೊಂಡ ಭಾರತೀಯರೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಜರ್ಮನಿಯ ಮ್ಯಾಗ್ಡೆಬರ್ಗ್‌ನಲ್ಲಿರುವ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ನಡೆದ ಭೀಕರ ದಾಳಿಯನ್ನು ಭಾರತ ಖಂಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.

“ಈ ದಾಳಿಯಲ್ಲಿ ಹಲವಾರು ಮಂದಿ ತಮ್ಮ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾರೆ. ಅನೇಕರು ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮ ಪ್ರಾರ್ಥನೆಗಳು ಸಂತ್ರಸ್ತರೊಂದಿಗೆ ಇದೆ. ಗಾಯಗೊಂಡಿರುವ ಭಾರತೀಯರು ಮತ್ತು ಅವರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನಾವು ಮಾಡುತ್ತಿದ್ದೇವೆ” ಎಂದು ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.

ಇಸ್ಲಾಂ ವಿರೋಧಿ ಅಭಿಪ್ರಾಯಗಳನ್ನು ಹೊಂದಿದ್ದ ವ್ಯಕ್ತಿಯೋರ್ವ ಈ ಕೃತ್ಯವನ್ನಸಗಿದ್ದು, ಈತ ಮುಸ್ಲಿಮರ ವಿರುದ್ಧ ಮತ್ತು ಜರ್ಮನಿಯ ವಲಸೆ ನೀತಿಯ ವಿರುದ್ಧ ಕೋಪಗೊಂಡು ಈ ಕೃತ್ಯವನ್ನೆಸಗಿದ್ದಾನೆ ಎಂದು ತಿಳಿದು ಬಂದಿದೆ.

Hot this week

ಅನಿವಾಸಿ ಕನ್ನಡಿಗರ ಸಚಿವಾಲಯ, ಸಚಿವರ ನೇಮಕಕ್ಕೆ ಆಗ್ರಹ; ಟ್ವಿಟ್ಟರ್ ಅಭಿಯಾನ ಭಾರತದಲ್ಲಿ ನಂ.1 ಟ್ರೆಂಡಿಂಗ್

ದುಬೈ: ಅನಿವಾಸಿ ಕನ್ನಡಿಗರ ಬಹುಕಾಲದ ಬೇಡಿಕೆಯಾಗಿರುವ ಎನ್‌ಆರ್‌ಐ ಸಚಿವಾಲಯವನ್ನು ಕೂಡಲೇ ಆರಂಭಿಸಿ,...

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

Related Articles

Popular Categories