Top Newsಜನವರಿ 10 ರಂದು ಎನ್‌ಆರ್‌ಐ ಫಾರಂ ಕರ್ನಾಟಕ-ಬಹರೈನ್‌ ಉದ್ಘಾಟನೆ

ಜನವರಿ 10 ರಂದು ಎನ್‌ಆರ್‌ಐ ಫಾರಂ ಕರ್ನಾಟಕ-ಬಹರೈನ್‌ ಉದ್ಘಾಟನೆ

ಬಹರೈನ್‌ ನಲ್ಲಿರುವ ಕನ್ನಡಿಗರಿಗಾಗಿ ಸ್ಥಾಪಿಸಲಾಗಿರುವ, ಕರ್ನಾಟಕ ಸರಕಾರದಿಂದ ನೋಂದಾಯಿತ ಎನ್‌ ಆರ್‌ ಐ ಫಾರಂ ಕರ್ನಾಟಕ-ಬಹರೈನ್‌ (NFKB) ಜನವರಿ 10 ರಂದು ಮನಾಮದ ಇಂಡಿಯನ್‌ ಕ್ಲಬ್‌ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉದ್ಘಾಟನೆಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ನೂತನ ಎನ್‌ಎಫ್‌ಕೆಬಿ ಸಮಿತಿಯ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ NFKB ಅಧ್ಯಕ್ಷ ರಾಜ್ ಕುಮಾರ್, ʼಕಾರ್ಯಕ್ರಮವು ಸಂಜೆ 5:30 ಕ್ಕೆ ಪ್ರಾರಂಭವಾಗುತ್ತದೆ, ನಂತರ ಸಾಂಸ್ಕೃತಿಕ ಪ್ರದರ್ಶನ ನಡೆಯಲಿದೆ ಎಂದರು. ಬಹರೈನ್‌ ನಲ್ಲಿ ನೆಲೆಸಿರುವ ಕನ್ನಡಿಗರ ಹಿತಾಸಕ್ತಿಗಳನ್ನು ರಕ್ಷಿಸುವುದು ಫಾರಂನ ಮೊದಲ ಉದ್ದೇಶವಾಗಿದೆ. ಕನ್ನಡ ಮಾತನಾಡುವ ಜನರ ನಡುವೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಪರ್ಕಗಳನ್ನು ಬಲಪಡಿಸುವ ಗುರಿಯೂ ನಮ್ಮದು. ಬಹರೈನ್‌ ನಲ್ಲಿ ಸುಮಾರು 25 ಸಾವಿರ ಜನರು ಕನ್ನಡಿಗರಿದ್ದಾರೆ. ಎನ್‌ ಆರ್‌ ಐ ಫಾರಂ ಕರ್ನಾಟಕ-ಬಹರೈನ್‌ ಕರ್ನಾಟಕ ಸರಕಾರ, ಭಾರತೀಯ ರಾಯಭಾರ ಕಚೇರಿ ಮತ್ತು ಇತರ ಸಂಸ್ಥೆಗಳ ಜೊತೆ ಸಂಪರ್ಕ ಹೊಂದಿದ್ದು, ವಿದೇಶದಲ್ಲಿರುವ ಕನ್ನಡಿಗರ ಹಿತಾಸಕ್ತಿಗಳನ್ನು ಕಾಪಾಡಲು ಸಹಕರಿಸುತ್ತದೆʼ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್, ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಎನ್‌ಆರ್‌ಐ ಫೋರಂನ ಉಪಾಧ್ಯಕ್ಷೆ ಆರತಿ ಕೃಷ್ಣ, ಮಂಗಳೂರು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್, ಡಾ.ಎಚ್.ಎಸ್.ಶೆಟ್ಟಿ, ಪ್ರಶಾಂತ್ ಪೂಜಾರಿ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದವರು ಹೇಳಿದ್ದಾರೆ.

Hot this week

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

ಜರ್ಮನಿಯಲ್ಲಿ ಅದ್ಧೂರಿಯಾಗಿ ನೆರವೇರಿದ ಜಾನಪದ ವೈಭವ; ಸಂಸ್ಕೃತಿಯ ಗತ ವೈಭವ ಸೃಷ್ಟಿ

ಜರ್ಮನಿ: ರೈನ್ ಮೈನ್ ಕನ್ನಡ ಸಂಘದಿಂದ ಇದೇ ಮೊದಲ ಬಾರಿಗೆ ಶನಿವಾರ...

Related Articles

Popular Categories