ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಶಾಲೆಯ ಕ್ರೀಡಾಂಗಣದಿಂದ ಮುಖ್ಯಮಂತ್ರಿ ಕಚೇರಿವರೆಗೆ; ತಮ್ಮ ವಿದ್ಯಾರ್ಥಿ ಡಿ.ಕೆ. ಶಿವಕುಮಾರ್ ಕುರಿತು ನಿವೃತ್ತ ಶಿಕ್ಷಕ ಪಾಂಡು ಅವರ ನೆನಪುಗಳು

ಲೇಖನ: ಬೆಂಕಿ ಬಸಣ್ಣ, ನ್ಯೂಯಾರ್ಕ್ ಇತಿಹಾಸವು ಮಹಾನ್ ನಾಯಕರನ್ನು ನೆನಪಿಸಿಕೊಳ್ಳುತ್ತದೆ. ಆದರೆ ಪ್ರತಿಯೊಬ್ಬ...

ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ವಾರ್ಷಿಕ ಮಹಾಸಭೆ

ದುಬೈ: ಬ್ಯಾರೀಸ್ ಕಲ್ಚರಲ್ ಫೋರಮ್ (ಬಿಸಿಎಫ್) ಇದರ 28ನೇ ವಾರ್ಷಿಕ ಮಹಾಸಭೆ...

ದುಬೈಯಲ್ಲಿ ಕನ್ನಡ ಭಾಷೆಯನ್ನು ಎತ್ತಿ ಹಿಡಿದ ಕ್ರಿಯಾತ್ಮಕ ಕಲಾ ನಿರ್ದೇಶಕ ಬಿ.ಕೆ.ಗಣೇಶ್ ರೈ

ಜಗತ್ತಿನ ನಾನಾ ಮೂಲೆಗಳಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡ ನಾಡು-ನುಡಿ, ಸಂಸ್ಕೃತಿ, ಪರಂಪರೆಗಾಗಿ...

ಜರ್ಮನಿ; ನಾಟ್ಯಫೆಸ್ಟ್ 2026: ಸಂಸ್ಕೃತಿ ಮತ್ತು ಸೃಜನಾತ್ಮಕತೆಯ ರಂಜಕ ವೇದಿಕೆ

ಫ್ರಾಂಕ್‌ಫರ್ಟ್‌ (ಜರ್ಮನಿ): ಇತ್ತೀಚೆಗೆ ಮ್ಯೂನಿಕ್‌ನ ಐನ್‌ಸ್ಟೈನ್ ಕಲ್ಚರ್ ವೇದಿಕೆ ನಾಟ್ಯಫೆಸ್ಟ್ 2026...

ಕರ್ನಾಟಕ ಸಂಘ ಖತರ್‌ನಿಂದ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ

ದೋಹಾ(ಖತರ್‌): ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ...

Related Articles

Popular Categories