ಬಹರೈನ್ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌ ಜೈಲಿನಲ್ಲಿದ್ದ ತಮಿಳುನಾಡಿನ 28 ಮೀನುಗಾರರು ತಾಯ್ನಾಡಿಗೆ

ಬಹರೈನ್‌: ಮೂರು ತಿಂಗಳ ಹಿಂದೆ ಬಹರೈನ್‌ ನ ಕರಾವಳಿ ಕಾವಲು ಪಡೆಯಿಂದ ಬಂಧನಕ್ಕೆ ಒಳಗಾಗಿದ್ದ ತಮಿಳುನಾಡಿನ ಇಡಿಂತಕರೈನ 28 ಮೀನುಗಾರರು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ.

ವಿಧಾನಸಭೆ ಸ್ಪೀಕರ್ ಎಂ ಅಪ್ಪಾವು ಮತ್ತು ತಿರುನಲ್ವೇಲಿ ಸಂಸದ ಸಿ ರಾಬರ್ಟ್ ಬ್ರೂಸ್ ಈ ಮೀನುಗಾರರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಆಗಸ್ಟ್ 31 ರಂದು ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದ ಈ ಮೀನುಗಾರರನ್ನು ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಸೆಪ್ಟೆಂಬರ್ 11ರಂದು ಬಂಧಿಸಲಾಗಿತ್ತು. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮತ್ತು ಸಂಸದ ಬ್ರೂಸ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದು, ಮೀನುಗಾರರನ್ನು ವಾಪಸ್ ಕಳುಹಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಬಹರೈನ್‌ ನ ಸ್ಥಳೀಯ ನ್ಯಾಯಾಲಯ ಈ ಮೀನುಗಾರರಿಗೆ 6 ತಿಂಗಳ ಜೈಲು ಶಿಕ್ಷೆ ಘೋಷಿಸಿದ್ದು, ನಂತರ ಅದನ್ನು 3 ತಿಂಗಳುಗಳಿಗೆ ಇಳಿಸಿತ್ತು. ಇದೀಗ ಶಿಕ್ಷೆಯ ಅವಧಿ ಮುಗಿದ ನಂತರ ಮೀನುಗಾರರನ್ನು ಬಿಡುಗಡೆಗೊಳಿಸಲಾಗಿದೆ.

Hot this week

ಕನ್ನಡಿಗರ ಕೂಟ ದುಬೈ ವತಿಯಿಂದ ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್‌ಗೆ ಸನ್ಮಾನ

ಬೆಂಗಳೂರು: ಕನ್ನಡಿಗರ ಕೂಟ, ದುಬೈ ತಂಡವು ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ...

ಫ್ಲೋರಿಡಾ ತುಳು ಕೂಟದ 2ನೇ ವಾರ್ಷಿಕ ಪೊಟ್ಲಕ್ ಪಿಕ್ನಿಕ್ ಸಂಭ್ರಮ

ಅಮೇರಿಕದ ಫ್ಲೋರಿಡಾ ತುಳು ಕೂಟವು ಇತ್ತೀಚೆಗೆ ಕ್ಯಾಸೆಲ್‌ಬೆರ್ರಿ ಒರ್ಲಾಂಡೊದಲ್ಲಿ ತನ್ನ ಎರಡನೇ...

ಭಾರತದ ನೂತನ ಕಾನ್ಸುಲ್ ಜನರಲ್ ಡಾ.ವಿಷ್ಣುವರ್ಧನ ರೆಡ್ಡಿಗೆ ಕನ್ನಡಿಗರ ಕೂಟ ದುಬೈಯಿಂದ ಸ್ವಾಗತ

ದುಬೈ: ಯುಎಇಯ ಪ್ರತಿಷ್ಠಿತ ಕನ್ನಡ ಸಂಘಟನೆಗಳಲ್ಲಿ ಒಂದಾಗಿರುವ ಕನ್ನಡಿಗರ ಕೂಟ, ದುಬೈ...

ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ರಕ್ತದಾನದಿಂದ ಮಾನವೀಯತೆಯ ಸಂದೇಶ ಸಾರಿದ ಕರ್ನಾಟಕ ಸಂಘ ಶಾರ್ಜಾ

ದುಬೈ: ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು...

ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್‌ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸಲಾಲ(ಒಮಾನ್): ಸಲಾಲದ ಅಲ್ ನೂರ್ ಎಜುಕೇಶನ್ ಸೆಂಟರ್ ನಲ್ಲಿ ಬ್ಯಾರೀಸ್ ಕಮ್ಯುನಿಟಿ...

Related Articles

Popular Categories