ಯುಎಇಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕೆಸಿಎಫ್ ಮೀಲಾದ್ ಸಮಾವೇಶಕ್ಕೆ ಸ್ವಾಗತ ಸಮಿತಿ ರಚನೆ

ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್.) ಅಬುಧಾಬಿ ಝೋನ್ ವತಿಯಿಂದ ಆಯೋಜಿಸಲ್ಪಡುವ ವಿಶ್ವ ಪ್ರವಾದಿ ಪೈಗಂಬರ್(ಸ.)ರ 1499ನೇ ಮೀಲಾದ್ ಸಮಾವೇಶದ ಯಶಸ್ವಿಗೆ ಸ್ವಾಗತ ಸಮಿತಿಯನ್ನು ಇತ್ತೀಚೆಗೆ ಅಬುಧಾಬಿ ಕೆಸಿಎಫ್ ಸಭಾಭವನದಲ್ಲಿ ರಚಿಸಲಾಯಿತು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಜಿ ಜಲ್ಲಿ, ಕನ್ವೀನರ್ ರಾಗಿ ಉಮರ್ ಈಶ್ವರಮಂಗಲ, ಕೋಶಾಧಿಕಾರಿಯಾಗಿ ಸಿದ್ದೀಕ್ ಎನ್.ಕೆ., ಸಲಹೆಗಾರರಾಗಿ ಅಬ್ದುಲ್ ಹಮೀದ್ ಸಅದಿ, ಪಿ.ಒಂ.ಎಚ್ ಈಶ್ವರಮಂಗಲ, ಇಬ್ರಾಹೀಂ ಸಖಾಫಿ ಕೆದುಂಬಾಡಿ, ಕೆ.ಎಚ್.ಸಖಾಫಿ ಈಶ್ವರಮಂಗಲ, ಹಾಜಿ ಮುಹಮ್ಮದ್ ಅಲಿ ವಳವೂರ್, ಇಬ್ರಾಹೀಂ ಬ್ರೈಟ್ ಮಾರ್ಬಲ್, ಇಕ್ಬಾಲ್ ಕುಂದಾಪುರ. ಕಾರ್ಯ ನಿರ್ವಾಹಕರಾಗಿ ಮುಹಮ್ಮದ್ ಹಸನ್ ಹಾಜಿ, ಸಿದ್ದೀಕ್ ಕೆ.ಎಚ್. ಇತರ ಕಾರ್ಯಕ್ರಮದ ಯಶಸ್ವಿಗಾಗಿ ಹಕೀಂ ತುರ್ಕಳಿಕೆ, ಹಸೈನಾರ್ ಅಮಾನಿ ಅಜ್ಜಾವರ, ಕಬೀರ್ ಬಾಯಂಬಾಡಿ, ನವಾಝ್ ಹಾಜಿ, ಹಾರಿಸ್ ಸಅದಿ, ಅಶ್ರಫ್ ಮುಸ್ಲಿಯಾರ್ ಕನ್ಯಾಡಿ, ನಿಝಾರ್ ಕುಂಬ್ಳೆ, ಇಂಜಿನಿಯರ್ ಅರ್ಶದ್, ಶರೀಫ್ ಕಾಜೂರ್, ಫಾರೂಕ್ ಸಖಾಫಿ, ಹಾಫಿಲ್ ಸಈದ್ ಹನೀಫಿ, ಅಮೀರ್ ಚಿಕ್ಕಮಗಳೂರು, ಮುಸ್ತಫ ಸಖಾಫಿ, ರಜಬ್ ನಾವುಂದ, ಶರೀಫ್ ಬೊಳ್ಮಾರ್, ಸುಹೈಲ್ ಬಜ್ಪೆ, ಹಮೀದ್ ಮುಸ್ಲಿಯಾರ್ ಕುಪ್ಪೆಟ್ಟಿ, ಹಿದಾಯತ್ ಕೊಡಗು ಒಳಗೊಂಡ ಮೀಲಾದ್ ಸಮಾವೇಶದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

‘ಮುತ್ತು ನಬಿ ಮನುಕುಲದ ಮಾರ್ಗದರ್ಶಿ’ ಎಂಬ ಶೀರ್ಷಿಕೆಯೊಂದಿಗೆ ಸೆಪ್ಟಂಬರ್ 8ರಂದು ಸಂಜೆ ಅಬುಧಾಬಿ ನಗರದ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ ನಡೆಯುವ ಮೀಲಾದ್ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಕೇರಳದ ಧಾರ್ಮಿಕ ವಿದ್ವಾಂಸ ಸೈಯದ್ ಅಬ್ದುರ್ರಹ್ಮಾನ್ ಆಟ್ಟೀರಿ ತಂಙಳ್ ಭಾಗವಹಿಸುವರು. ಅವರಲ್ಲದೇ, ಸಾಮಾಜಿಕ ಧಾರ್ಮಿಕ ಮತ್ತು ಉದ್ಯಮ ಕ್ಷೇತ್ರದ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕೆಸಿಎಫ್ ಪ್ರಕಟನೆ ತಿಳಿಸಿದೆ.

Hot this week

ದುಬೈನಲ್ಲಿ ‘ಗಂಧರ್ವ ಗಮಕ ಶಾಲೆ’ ಉದ್ಘಾಟನೆ

ದುಬೈ: ಪದ್ಮಶ್ರೀ ಹೊಸಹಳ್ಳಿ ಕೇಶವಮೂರ್ತಿ ಅವರ ಶಿಷ್ಯ ಪರಂಪರೆಯನ್ನು ಮುಂದುವರಿಸುವ ಮಹತ್ವದ...

ದುಬೈಯಲ್ಲಿ ಸಂಪನ್ನಗೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವೈಭವ

ದುಬೈ: ಅರಬ್ ಸಂಯುಕ್ತ ಸಂಸ್ಥಾನ ವಾಣಿಜ್ಯ ನಗರಿ ದುಬೈಯಲ್ಲಿ ಸಾಮೂಹಿಕ ಶ್ರೀ...

ಸಲಾಲದಲ್ಲಿ ಅದ್ದೂರಿಯಾಗಿ ನಡೆದ ಕನ್ನಡಿಗರ ‘ಸ್ನೇಹ ಸಂಗಮ’ ಕಾರ್ಯಕ್ರಮ

ಸಲಾಲ(ಒಮಾನ್): ಇಲ್ಲಿನ ಅನಿವಾಸಿ ಕನ್ನಡಿಗರ ಅನ್ನೂರ್ ಎಜುಕೇಶನಲ್ ಸೆಂಟರ್ ವತಿಯಿಂದ 'ಸ್ನೇಹ...

ವಿಶ್ವದಲ್ಲೇ ಮೊದಲ ಬಾರಿ ಜರ್ಮನ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಸಿದ್ಧತೆ

ವಿಶೇಷ ಸಂದರ್ಶನ: ಎಂ.ಇಕ್ಬಾಲ್ ಉಚ್ಚಿಲ, ದುಬೈ ಕರಾವಳಿ ಕರ್ನಾಟಕದ ಜನಪ್ರಿಯ ಕಲೆಯಾಗಿರುವ ಯಕ್ಷಗಾನವು...

ಫೆಬ್ರವರಿ 1ರಂದು ಶಾರ್ಜಾದಲ್ಲಿ ‘ಮಾರ್ಗದೀಪ ಪ್ರೀಮಿಯರ್ ಲೀಗ್-4’ ಕ್ರಿಕೆಟ್ ಟೂರ್ನಮೆಂಟ್; ಜರ್ಸಿ ಬಿಡುಗಡೆ

ದುಬೈ: ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ವತಿಯಿಂದ ದಿವಂಗತ ವಸಂತ್ ಬೇಕಲ್ ಸ್ಮರಣಾರ್ಥ...

Related Articles

Popular Categories